<p><strong>ನವದೆಹಲಿ:</strong> ‘ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಹಾಥರಸ್ ದಲಿತ ಮಹಿಳೆ ಅತ್ಯಾಚಾರ ಮತ್ತು ಸಾವಿನ ಪ್ರಕರಣದ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆ ನಡೆಸಲಿದೆ‘ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>‘ತನಿಖೆಯ ಮೇಲ್ವಿಚಾರಣೆ, ಸಂತ್ರಸ್ತೆಯ ಕುಟುಂಬಕ್ಕೆ ಭದ್ರತೆ ಒದಗಿಸುವುದು ಮತ್ತು ಅವರ ಯೋಗಕ್ಷೇಮ ನೋಡಿಕೊಳ್ಳುವುದು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನೂ ಅಲಹಬಾದ್ ಹೈಕೋರ್ಟ್ ಪರಿಗಣಿಸಲಿದೆ‘ ಎಂದು ನ್ಯಾಯಾಲಯ ತಿಳಿಸಿದೆ.</p>.<p>ಸಿಬಿಐ ತನಿಖೆ ಪೂರ್ಣಗೊಂಡ ನಂತರ ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ವರ್ಗಾವಣೆ ಮಾಡುವ ಮನವಿಯನ್ನು ಪರಿಗಣಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬಡೆ ನೇತೃತ್ವದ ನ್ಯಾಯಪೀಠ ಹೇಳಿದೆ.</p>.<p>ಉತ್ತರ ಪ್ರದೇಶದಲ್ಲಿ ನ್ಯಾಯಯುತ ವಿಚಾರಣೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಮತ್ತು ವಕೀಲರ ತಂಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ ಆದೇಶಿಸಿರುವ ನ್ಯಾಯಪೀಠ, ‘ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖಾ ವರದಿಯನ್ನು ಅಲಹಾಬಾದ್ ಹೈಕೋರ್ಟ್ಗೆ ಸಲ್ಲಿಸಲಿದೆ‘ ಎಂದು ತಿಳಿಸಿದೆ.</p>.<p>ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ಪರಿಗಣಿಸಿದ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಬಾಕಿ ಇರುವ ಒಂದು ಆದೇಶದಲ್ಲಿ ಸಂತ್ರಸ್ತೆಯ ಹೆಸರನ್ನು ತೆಗೆದು ಹಾಕುವಂತೆ ಕೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಹಾಥರಸ್ ದಲಿತ ಮಹಿಳೆ ಅತ್ಯಾಚಾರ ಮತ್ತು ಸಾವಿನ ಪ್ರಕರಣದ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆ ನಡೆಸಲಿದೆ‘ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>‘ತನಿಖೆಯ ಮೇಲ್ವಿಚಾರಣೆ, ಸಂತ್ರಸ್ತೆಯ ಕುಟುಂಬಕ್ಕೆ ಭದ್ರತೆ ಒದಗಿಸುವುದು ಮತ್ತು ಅವರ ಯೋಗಕ್ಷೇಮ ನೋಡಿಕೊಳ್ಳುವುದು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನೂ ಅಲಹಬಾದ್ ಹೈಕೋರ್ಟ್ ಪರಿಗಣಿಸಲಿದೆ‘ ಎಂದು ನ್ಯಾಯಾಲಯ ತಿಳಿಸಿದೆ.</p>.<p>ಸಿಬಿಐ ತನಿಖೆ ಪೂರ್ಣಗೊಂಡ ನಂತರ ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ವರ್ಗಾವಣೆ ಮಾಡುವ ಮನವಿಯನ್ನು ಪರಿಗಣಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬಡೆ ನೇತೃತ್ವದ ನ್ಯಾಯಪೀಠ ಹೇಳಿದೆ.</p>.<p>ಉತ್ತರ ಪ್ರದೇಶದಲ್ಲಿ ನ್ಯಾಯಯುತ ವಿಚಾರಣೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಮತ್ತು ವಕೀಲರ ತಂಡ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ ಆದೇಶಿಸಿರುವ ನ್ಯಾಯಪೀಠ, ‘ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖಾ ವರದಿಯನ್ನು ಅಲಹಾಬಾದ್ ಹೈಕೋರ್ಟ್ಗೆ ಸಲ್ಲಿಸಲಿದೆ‘ ಎಂದು ತಿಳಿಸಿದೆ.</p>.<p>ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ಪರಿಗಣಿಸಿದ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಬಾಕಿ ಇರುವ ಒಂದು ಆದೇಶದಲ್ಲಿ ಸಂತ್ರಸ್ತೆಯ ಹೆಸರನ್ನು ತೆಗೆದು ಹಾಕುವಂತೆ ಕೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>