<p><strong>ಶ್ರೀನಗರ:</strong> ಅಕ್ರಮವಾಗಿ ಬಂದೂಕು ಪರವಾನಗಿ ನೀಡಿದ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ದಾಳಿ ನಡೆಸಿರುವ ಸಿಬಿಐ, ಶ್ರೀನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ಶಾಹಿದ್ ಚೌಧರಿ ನಿವಾಸ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿಯ ವಿವಿಧೆಡೆ ಶೋಧ ನಡೆಸಿದೆ.</p>.<p>ಶ್ರೀನಗರ, ಅನಂತನಾಗ್, ಬಾರಾಮುಲ್ಲಾ, ಜಮ್ಮು, ಉಧಂಪುರ, ರಾಜೌರಿ ಹಾಗೂ ದೆಹಲಿಯ ಹಲವು ಸ್ಥಳಗಳು ಸೇರಿದಂತೆ 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ.</p>.<p>ಈ ವೇಳೆ ಐಎಎಸ್ ಅಧಿಕಾರಿ ಚೌಧರಿ ನಿವಾಸ, 20 ಗನ್ಹೌಸ್ಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಕಚೇರಿ ಹಾಗೂ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಚೌಧರಿ ಅವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಬುಡಕಟ್ಟು ವ್ಯವ ಹಾರಗಳ ಕಾರ್ಯದರ್ಶಿ ಮತ್ತು ಯುವ ಜನ ಯೋಜನೆ ಸಿಇಒ ಆಗಿದ್ದಾರೆ. ಅವರು ಕಥುವಾ, ರಿಯಾಸಿ, ರಜೌರಿ ಮತ್ತು ಉಧಂಪುರ ಜಿಲ್ಲೆಗಳಲ್ಲಿ ಜಿಲ್ಲಾಧಿ ಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆ ವೇಳೆ ಅವರು ಸಾವಿರಾರು ಬಂದೂಕು ಗಳಿಗೆಅಕ್ರಮವಾಗಿ ಪರವಾನಗಿ ನೀಡಿದ್ದರು ಎಂದು ಆರೋಪಿಸಲಾಗಿದೆ.</p>.<p>ಇದೇ ರೀತಿಯಲ್ಲಿ, 2019ರ ಡಿಸೆಂಬರ್ನಲ್ಲಿ ಶ್ರೀನಗರ, ಜಮ್ಮು, ಗುರುಗ್ರಾಮ (ಹರಿಯಾಣ), ಮೊಹಾಲಿ (ಪಂಜಾಬ್) ಮತ್ತು ನೋಯ್ಡಾ (ಉತ್ತರ ಪ್ರದೇಶ)ದ 17 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ನಿವೃತ್ತ ಜಿಲ್ಲಾಧಿಕಾರಿಗಳ/ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳ ನಿವಾಸದಲ್ಲಿ ಶೋಧ ನಡೆಸಲಾಗಿತ್ತು.</p>.<p>ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ರಂಜನ್, ಕುಪ್ವಾರಾ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಇತ್ರಿತ್ ಹುಸೇನ್ ರಫೀಕ್ ಅವರೊಂದಿಗೆ ಸೇರಿ ನಕಲಿ ದಾಖಲೆಗಳ ಆಧಾರದಲ್ಲಿ ಸಾಕಷ್ಟು ಬಂದೂಕುಗಳಿಗೆ ಪರವಾನಗಿ ನೀಡಿದ್ದಾರೆ ಎಂಬ ಆರೋಪದಲ್ಲಿ, 2020ರ ಮಾರ್ಚ್ನಲ್ಲಿ ಅವರಿಬ್ಬರನ್ನೂ ಸಿಬಿಐ ಬಂಧಿಸಿತ್ತು.</p>.<p>ಹಗರಣ ಸಂಬಂಧ ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆ ನಡೆಸಿದ ಸಂದರ್ಭದಲ್ಲಿ, ಸಾರ್ವಜನಿಕ ಅಧಿಕಾರಿಗಳು ಮತ್ತು ಹಿರಿಯ ಐಎಎಸ್ ಅಧಿಕಾರಿಗಳ ಹೆಸರು ಕೇಳಿ ಬಂದಿತ್ತು. ಆ ನಂತರದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು 2018ರಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು.</p>.<p>ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಬಂದೂಕು ಪರವಾನಗಿ ನೀಡುವಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಅಕ್ರಮವಾಗಿ ಬಂದೂಕು ಪರವಾನಗಿ ನೀಡಿದ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ದಾಳಿ ನಡೆಸಿರುವ ಸಿಬಿಐ, ಶ್ರೀನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ಶಾಹಿದ್ ಚೌಧರಿ ನಿವಾಸ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿಯ ವಿವಿಧೆಡೆ ಶೋಧ ನಡೆಸಿದೆ.</p>.<p>ಶ್ರೀನಗರ, ಅನಂತನಾಗ್, ಬಾರಾಮುಲ್ಲಾ, ಜಮ್ಮು, ಉಧಂಪುರ, ರಾಜೌರಿ ಹಾಗೂ ದೆಹಲಿಯ ಹಲವು ಸ್ಥಳಗಳು ಸೇರಿದಂತೆ 40 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ.</p>.<p>ಈ ವೇಳೆ ಐಎಎಸ್ ಅಧಿಕಾರಿ ಚೌಧರಿ ನಿವಾಸ, 20 ಗನ್ಹೌಸ್ಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಕಚೇರಿ ಹಾಗೂ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಚೌಧರಿ ಅವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಬುಡಕಟ್ಟು ವ್ಯವ ಹಾರಗಳ ಕಾರ್ಯದರ್ಶಿ ಮತ್ತು ಯುವ ಜನ ಯೋಜನೆ ಸಿಇಒ ಆಗಿದ್ದಾರೆ. ಅವರು ಕಥುವಾ, ರಿಯಾಸಿ, ರಜೌರಿ ಮತ್ತು ಉಧಂಪುರ ಜಿಲ್ಲೆಗಳಲ್ಲಿ ಜಿಲ್ಲಾಧಿ ಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆ ವೇಳೆ ಅವರು ಸಾವಿರಾರು ಬಂದೂಕು ಗಳಿಗೆಅಕ್ರಮವಾಗಿ ಪರವಾನಗಿ ನೀಡಿದ್ದರು ಎಂದು ಆರೋಪಿಸಲಾಗಿದೆ.</p>.<p>ಇದೇ ರೀತಿಯಲ್ಲಿ, 2019ರ ಡಿಸೆಂಬರ್ನಲ್ಲಿ ಶ್ರೀನಗರ, ಜಮ್ಮು, ಗುರುಗ್ರಾಮ (ಹರಿಯಾಣ), ಮೊಹಾಲಿ (ಪಂಜಾಬ್) ಮತ್ತು ನೋಯ್ಡಾ (ಉತ್ತರ ಪ್ರದೇಶ)ದ 17 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ನಿವೃತ್ತ ಜಿಲ್ಲಾಧಿಕಾರಿಗಳ/ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳ ನಿವಾಸದಲ್ಲಿ ಶೋಧ ನಡೆಸಲಾಗಿತ್ತು.</p>.<p>ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ರಂಜನ್, ಕುಪ್ವಾರಾ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಇತ್ರಿತ್ ಹುಸೇನ್ ರಫೀಕ್ ಅವರೊಂದಿಗೆ ಸೇರಿ ನಕಲಿ ದಾಖಲೆಗಳ ಆಧಾರದಲ್ಲಿ ಸಾಕಷ್ಟು ಬಂದೂಕುಗಳಿಗೆ ಪರವಾನಗಿ ನೀಡಿದ್ದಾರೆ ಎಂಬ ಆರೋಪದಲ್ಲಿ, 2020ರ ಮಾರ್ಚ್ನಲ್ಲಿ ಅವರಿಬ್ಬರನ್ನೂ ಸಿಬಿಐ ಬಂಧಿಸಿತ್ತು.</p>.<p>ಹಗರಣ ಸಂಬಂಧ ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತನಿಖೆ ನಡೆಸಿದ ಸಂದರ್ಭದಲ್ಲಿ, ಸಾರ್ವಜನಿಕ ಅಧಿಕಾರಿಗಳು ಮತ್ತು ಹಿರಿಯ ಐಎಎಸ್ ಅಧಿಕಾರಿಗಳ ಹೆಸರು ಕೇಳಿ ಬಂದಿತ್ತು. ಆ ನಂತರದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು 2018ರಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು.</p>.<p>ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಬಂದೂಕು ಪರವಾನಗಿ ನೀಡುವಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>