ನವದೆಹಲಿ: ಕೇಂದ್ರ ಸರ್ಕಾರದ ಅತಿಯಾಗಿ ಒತ್ತಡ ಹೇರಿದ್ದರಿಂದಲೇ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಸಿಬಿಐ, ಸಿಸೋಡಿಯಾ ಆರೋಪ ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ತಿಳಿಸಿದೆ.
‘ಮನೀಶ್ ಸಿಸೋಡಿಯಾ ಅವರ ಹೇಳಿಕೆಯು ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆಳೆಯುವ ಯತ್ನವಾಗಿದೆ. ಸಜ್ಜನ ಅಧಿಕಾರಿ ದಿವಂಗತ ಜಿತೇಂದ್ರ ಕುಮಾರ್ ಅವರು ಸಿಸೋಡಿಯಾ ಪ್ರಕರಣದ ತನಿಖಾ ಪ್ರಕ್ರಿಯೆಯೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ’ ಎಂದು ಸಿಬಿಐ ಸ್ಪಷ್ಟಪಡಿಸಿದೆ.
‘ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಸಿಬಿಐ ಜಿತೇಂದ್ರ ಕುಮಾರ್ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸಿಸೋಡಿಯಾ ಹೇಳಿಕೆ ನೀಡಿದ್ದರು.