ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ವೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪಕ್ಕೆ ಸಂಬಂಧಿಸಿದಂತೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸುವಂತೆ ಬಾಂಬೆ ಹೈಕೋರ್ಟ್ ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ನಿರ್ದೇಶನ ನೀಡಿದ್ದು, ಸಿಬಿಐ ಮಂಗಳವಾರ ರಾತ್ರಿ ಪ್ರಾಥಮಿಕ ತನಿಖೆ ಆರಂಭಿಸಿದೆ. ಕೋರ್ಟ್ ಆದೇಶದ ನಂತರ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಮತ್ತು ದೇಶಮುಖ್ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ.