<p><strong>ಮುಂಬೈ:</strong> ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ಶುಕ್ರವಾರ ಆರಂಭಿಸಿತು.</p>.<p>ಈ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದ ಬೆನ್ನಲ್ಲೇಮುಂಬೈಗೆ ಬಂದಿಳಿದ ಸಿಬಿಐ ಅಧಿಕಾರಿಗಳ ತಂಡ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ, ವರದಿಗಳನ್ನುಮುಂಬೈ ಪೊಲೀಸರಿಂದ ಸಂಗ್ರಹಿಸಿತು.</p>.<p>ಸಾಂತಾಕ್ರೂಜ್ ಪ್ರದೇಶದಲ್ಲಿರುವ ಐಎಎಫ್ನ ಅತಿಥಿಗೃಹದಲ್ಲಿ ಅಧಿಕಾರಿಗಳ ತಂಡ ವಾಸ್ತವ್ಯ ಹೂಡಿದೆ. ಸುಶಾಂತ್ ಸಿಂಗ್ ಮನೆಯ ಬಾಣಸಿಗನನ್ನು ಅತಿಥಿಗೃಹಕ್ಕೆ ಕರೆಸಿಕೊಂಡ ಅಧಿಕಾರಿಗಳು, ವಿಚಾರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿ ಹಲವು ಜನರ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡರು.</p>.<p>ಮತ್ತೊಂದು ತಂಡ ಬಾಂದ್ರಾ ಪೊಲೀಸ್ ಠಾಣೆಗೆ ತೆರಳಿ, ಪ್ರಕರಣಕ್ಕೆ ಸಂಬಂಧಪಟ್ಟ ವರದಿಗಳು, ಮಹತ್ವದ ದಾಖಲೆಗಳನ್ನು ಸಂಗ್ರಹಿಸಿತು. ಮುಂಬೈ ಪೊಲೀಸರು ಕೈಗೊಂಡಿದ್ದ ತನಿಖೆಯ ನೇತೃತ್ವ ವಹಿಸಿದ್ದ ಡಿಸಿಪಿ ಅಭಿಷೇಕ್ ತ್ರಿಮುಖೆ ಅವರನ್ನೂ ತಂಡ ಭೇಟಿ ಮಾಡಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಅಕ್ರಮ ಹಣ ವರ್ಗಾವಣೆ: ಸಹೋದರಿ ವಿಚಾರಣೆ</strong><br />ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಪ್ರಿಯಾಂಕಾ ಸಿಂಗ್ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿಕೊಂಡಿದೆ.</p>.<p>ಇ.ಡಿ ಈಗಾಗಲೇ ಸುಶಾಂತ್ ತಂದೆ ಕೆ.ಕೆ. ಸಿಂಗ್ ಮತ್ತು ಇನ್ನೊಬ್ಬ ಸಹೋದರಿ ಮೀತು ಸಿಂಗ್ ಅವರನ್ನು ವಿಚಾರಣೆ ನಡೆಸಿದೆ.ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಪ್ರಶ್ನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ಶುಕ್ರವಾರ ಆರಂಭಿಸಿತು.</p>.<p>ಈ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದ ಬೆನ್ನಲ್ಲೇಮುಂಬೈಗೆ ಬಂದಿಳಿದ ಸಿಬಿಐ ಅಧಿಕಾರಿಗಳ ತಂಡ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ, ವರದಿಗಳನ್ನುಮುಂಬೈ ಪೊಲೀಸರಿಂದ ಸಂಗ್ರಹಿಸಿತು.</p>.<p>ಸಾಂತಾಕ್ರೂಜ್ ಪ್ರದೇಶದಲ್ಲಿರುವ ಐಎಎಫ್ನ ಅತಿಥಿಗೃಹದಲ್ಲಿ ಅಧಿಕಾರಿಗಳ ತಂಡ ವಾಸ್ತವ್ಯ ಹೂಡಿದೆ. ಸುಶಾಂತ್ ಸಿಂಗ್ ಮನೆಯ ಬಾಣಸಿಗನನ್ನು ಅತಿಥಿಗೃಹಕ್ಕೆ ಕರೆಸಿಕೊಂಡ ಅಧಿಕಾರಿಗಳು, ವಿಚಾರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿ ಹಲವು ಜನರ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡರು.</p>.<p>ಮತ್ತೊಂದು ತಂಡ ಬಾಂದ್ರಾ ಪೊಲೀಸ್ ಠಾಣೆಗೆ ತೆರಳಿ, ಪ್ರಕರಣಕ್ಕೆ ಸಂಬಂಧಪಟ್ಟ ವರದಿಗಳು, ಮಹತ್ವದ ದಾಖಲೆಗಳನ್ನು ಸಂಗ್ರಹಿಸಿತು. ಮುಂಬೈ ಪೊಲೀಸರು ಕೈಗೊಂಡಿದ್ದ ತನಿಖೆಯ ನೇತೃತ್ವ ವಹಿಸಿದ್ದ ಡಿಸಿಪಿ ಅಭಿಷೇಕ್ ತ್ರಿಮುಖೆ ಅವರನ್ನೂ ತಂಡ ಭೇಟಿ ಮಾಡಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಅಕ್ರಮ ಹಣ ವರ್ಗಾವಣೆ: ಸಹೋದರಿ ವಿಚಾರಣೆ</strong><br />ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಪ್ರಿಯಾಂಕಾ ಸಿಂಗ್ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿಕೊಂಡಿದೆ.</p>.<p>ಇ.ಡಿ ಈಗಾಗಲೇ ಸುಶಾಂತ್ ತಂದೆ ಕೆ.ಕೆ. ಸಿಂಗ್ ಮತ್ತು ಇನ್ನೊಬ್ಬ ಸಹೋದರಿ ಮೀತು ಸಿಂಗ್ ಅವರನ್ನು ವಿಚಾರಣೆ ನಡೆಸಿದೆ.ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಪ್ರಶ್ನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>