‘ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಿಬಿಐ, ಪ್ರಕರಣದ ತನಿಖೆ ಮುಂದುವರಿಸಿತ್ತು. ಸಿಬಿಐ ಅಧಿಕಾರಿಗಳ ವಿರುದ್ಧ ಆಂಧ್ರ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿತ್ತು. ತನಿಖಾಧಿಕಾರಿಗಳ ವಿರುದ್ಧವೇ ಸುಳ್ಳು ಆರೋಪಗಳನ್ನು ಮಾಡಲಾಗಿತ್ತು. ಕ್ಷುಲ್ಲಕ ದೂರುಗಳನ್ನು ದಾಖಲಿಸಲಾಗಿತ್ತು. ಹೀಗಾಗಿ ಸಿಬಿಐ ತನಿಖೆ ನಡೆಸುವುದನ್ನು ನಿಲ್ಲಿಸಿತ್ತು. ಈಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಈ ಸಂಬಂಧ ಮೃತರ ಮಗಳು ಸುನೀತಾ ನಾರೆಡ್ಡಿ ಹಾಗೂ ಅವರ ತಾಯಿ ಆತಂಕ ವ್ಯಕ್ತಪಡಿಸಿರುವುದರಲ್ಲೂ ಅರ್ಥವಿದೆ’ ಎಂದು ನ್ಯಾಯಪೀಠ ಹೇಳಿದೆ.