ನವದೆಹಲಿ: ಲಂಚ ಪಡೆದ ಆರೋಪದ ಮೇಲೆ ಇನ್ಸ್ಪೆಕ್ಟರ್ ಕಪಿಲ್ ಧನಕಡ್ ಮತ್ತು ಸ್ಟೆನೋಗ್ರಾಫರ್ ಸಮೀರ್ ಕುಮಾರ್ ಸಿಂಗ್ ಅವರನ್ನು ಸಿಬಿಐ ಶನಿವಾರ ಅಮಾನತುಗೊಳಿಸಿದೆ.
₹4,300 ಕೋಟಿ ಬ್ಯಾಂಕ್ ವಂಚನೆಯ ಎರಡು ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಮಾಹಿತಿಯನ್ನು ಒದಗಿಸಲು ಮತ್ತು ತನಿಖೆಯಲ್ಲಿ ರಾಜಿ ಮಾಡಿಕೊಳ್ಳಲು ಈ ಅಧಿಕಾರಿಗಳು ಲಂಚ ಪಡೆದಿದ್ದರು ಎನ್ನಲಾಗಿದೆ.
‘ಧನಕಡ್ ಮತ್ತು ಸಮೀರ್ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನಿರ್ದೇಶಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಧನಕಡ್ ಅವರು ಸುಮಾರು ₹25 ಲಕ್ಷ ಲಂಚ ಸ್ವೀಕರಿಸಿದ್ದಾರೆ ಎಂದು ಹೇಳಲಾಗಿದೆ.