ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಆರೋಪ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಸಿಬಿಐ

Last Updated 16 ಜನವರಿ 2021, 18:42 IST
ಅಕ್ಷರ ಗಾತ್ರ

ನವದೆಹಲಿ: ಲಂಚ ಪಡೆದ ಆರೋಪದ ಮೇಲೆ ಇನ್‌ಸ್ಪೆಕ್ಟರ್‌ ಕಪಿಲ್‌ ಧನಕಡ್‌ ಮತ್ತು ಸ್ಟೆನೋಗ್ರಾಫರ್‌ ಸಮೀರ್‌ ಕುಮಾರ್‌ ಸಿಂಗ್‌ ಅವರನ್ನು ಸಿಬಿಐ ಶನಿವಾರ ಅಮಾನತುಗೊಳಿಸಿದೆ.

₹4,300 ಕೋಟಿ ಬ್ಯಾಂಕ್‌ ವಂಚನೆಯ ಎರಡು ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಮಾಹಿತಿಯನ್ನು ಒದಗಿಸಲು ಮತ್ತು ತನಿಖೆಯಲ್ಲಿ ರಾಜಿ ಮಾಡಿಕೊಳ್ಳಲು ಈ ಅಧಿಕಾರಿಗಳು ಲಂಚ ಪಡೆದಿದ್ದರು ಎನ್ನಲಾಗಿದೆ.

‘ಧನಕಡ್‌ ಮತ್ತು ಸಮೀರ್‌ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ನಿರ್ದೇಶಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಧನಕಡ್‌ ಅವರು ಸುಮಾರು ₹25 ಲಕ್ಷ ಲಂಚ ಸ್ವೀಕರಿಸಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT