<p><strong>ನವದೆಹಲಿ</strong>: ಅಖಾಡ ಪರಿಷತ್ನ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಈ ಪ್ರಕರಣವನ್ನು ಭೇದಿಸುವುದಕ್ಕಾಗಿ ಸಿಬಿಐ ವಿಶೇಷ ತನಿಖಾ ತಂಡವೊಂದನ್ನು ರಚಿಸಿದೆ ಎಂದು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.</p>.<p>ಮಹಾಂತ ನರೇಂದ್ರ ಗಿರಿ ಅವರು ಸೋಮವಾರ ಸಂಜೆ ಪ್ರಯಾಗರಾಜ್ನ ದರ್ಗಾಂಜ್ ಪ್ರದೇಶದ ಬಘಂಬರಿ ಮಠದ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.</p>.<p>ಮೇಲ್ನೋಟಕ್ಕೆ ನರೇಂದ್ರ ಗಿರಿ ಅವರ ಸಾವು ಆತ್ಮಹತ್ಯೆಯಂತೆ ಕಂಡುಬಂದರೂ, ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.</p>.<p>ಗಿರಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ಉತ್ತರ ಪ್ರದೇಶದ ಹಲವು ರಾಜಕೀಯ ಮುಖಂಡರು ಒತ್ತಾಯಿಸಿದ್ದರು.</p>.<p>ನರೇಂದ್ರ ಗಿರಿ ಅಸಹಜ ಸಾವಿನಲ್ಲಿ ಅವರ ಶಿಷ್ಯ ಮಹಾಂತ ಜ್ಞಾನ ದಾಸ್ ಕೈವಾಡವಿದೆ ಎಂಬ ಮಾತುಗಳು ಮುನ್ನೆಲೆಗೆ ಬಂದಿವೆ. ದಾಸ್ ಅವರು ಕ್ರಿಮಿನಲ್ ಚಟುವಟಿಕೆಗಳು ಮತ್ತು ಆಕ್ಷೇಪಾರ್ಹ ನಡವಳಿಕೆಯ ಆರೋಪಗಳನ್ನು ಎದುರಿಸುತ್ತಿದ್ದಾರೆ.<br /><br />ಉಜ್ಜಯಿನಿ, ಪ್ರಯಾಗರಾಜ್ ಮತ್ತು ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಕುಂಭಮೇಳಗಳನ್ನು ನರೇಂದ್ರ ಗಿರಿ ನೇತೃತ್ವದಲ್ಲಿ ನಡೆಸಲಾಗಿತ್ತು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲಿಯೂ ಗಿರಿ ಅವರ ಪಾತ್ರ ಮಹತ್ವದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಖಾಡ ಪರಿಷತ್ನ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಈ ಪ್ರಕರಣವನ್ನು ಭೇದಿಸುವುದಕ್ಕಾಗಿ ಸಿಬಿಐ ವಿಶೇಷ ತನಿಖಾ ತಂಡವೊಂದನ್ನು ರಚಿಸಿದೆ ಎಂದು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.</p>.<p>ಮಹಾಂತ ನರೇಂದ್ರ ಗಿರಿ ಅವರು ಸೋಮವಾರ ಸಂಜೆ ಪ್ರಯಾಗರಾಜ್ನ ದರ್ಗಾಂಜ್ ಪ್ರದೇಶದ ಬಘಂಬರಿ ಮಠದ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.</p>.<p>ಮೇಲ್ನೋಟಕ್ಕೆ ನರೇಂದ್ರ ಗಿರಿ ಅವರ ಸಾವು ಆತ್ಮಹತ್ಯೆಯಂತೆ ಕಂಡುಬಂದರೂ, ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.</p>.<p>ಗಿರಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ಉತ್ತರ ಪ್ರದೇಶದ ಹಲವು ರಾಜಕೀಯ ಮುಖಂಡರು ಒತ್ತಾಯಿಸಿದ್ದರು.</p>.<p>ನರೇಂದ್ರ ಗಿರಿ ಅಸಹಜ ಸಾವಿನಲ್ಲಿ ಅವರ ಶಿಷ್ಯ ಮಹಾಂತ ಜ್ಞಾನ ದಾಸ್ ಕೈವಾಡವಿದೆ ಎಂಬ ಮಾತುಗಳು ಮುನ್ನೆಲೆಗೆ ಬಂದಿವೆ. ದಾಸ್ ಅವರು ಕ್ರಿಮಿನಲ್ ಚಟುವಟಿಕೆಗಳು ಮತ್ತು ಆಕ್ಷೇಪಾರ್ಹ ನಡವಳಿಕೆಯ ಆರೋಪಗಳನ್ನು ಎದುರಿಸುತ್ತಿದ್ದಾರೆ.<br /><br />ಉಜ್ಜಯಿನಿ, ಪ್ರಯಾಗರಾಜ್ ಮತ್ತು ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಕುಂಭಮೇಳಗಳನ್ನು ನರೇಂದ್ರ ಗಿರಿ ನೇತೃತ್ವದಲ್ಲಿ ನಡೆಸಲಾಗಿತ್ತು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲಿಯೂ ಗಿರಿ ಅವರ ಪಾತ್ರ ಮಹತ್ವದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>