<p><strong>ನವದೆಹಲಿ:</strong> ಜಾರ್ಖಂಡ್ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>‘ಪ್ರಕರಣದ ತನಿಖೆ ವಹಿಸಿಕೊಳ್ಳುವಂತೆ ಜಾರ್ಖಂಡ್ ಸರ್ಕಾರ ಸಲ್ಲಿಸಿದ್ದ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಕುರಿತು ಧನಬಾದ್ ಪೊಲೀಸರು ದಾಖಲಿಸಿರುವ ಎಫ್ಐಆರ್ಅನ್ನು ಸಹ ಪಡೆದುಕೊಳ್ಳಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.</p>.<p>ಉತ್ತಮ್ ಆನಂದ್ ಅವರು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ಜುಲೈ 28ರಂದು ಬೆಳಿಗ್ಗೆ 5 ಗಂಟೆಯಲ್ಲಿ ಜಾಗಿಂಗ್ ಹೊರಟಿದ್ದರು. ಆಗ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು.</p>.<p><a href="https://www.prajavani.net/india-news/while-some-covid-cases-could-go-undetected-missing-out-on-deaths-completely-unlikely-govt-854659.html" itemprop="url">ಮರಣ ನೋಂದಣಿ ವ್ಯವಸ್ಥೆಯಿಂದ ಕೋವಿಡ್ ಸಾವಿನ ಸಂಖ್ಯೆ ಕೈತಪ್ಪದು: ಆರೋಗ್ಯ ಸಚಿವಾಲಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾರ್ಖಂಡ್ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>‘ಪ್ರಕರಣದ ತನಿಖೆ ವಹಿಸಿಕೊಳ್ಳುವಂತೆ ಜಾರ್ಖಂಡ್ ಸರ್ಕಾರ ಸಲ್ಲಿಸಿದ್ದ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಕುರಿತು ಧನಬಾದ್ ಪೊಲೀಸರು ದಾಖಲಿಸಿರುವ ಎಫ್ಐಆರ್ಅನ್ನು ಸಹ ಪಡೆದುಕೊಳ್ಳಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.</p>.<p>ಉತ್ತಮ್ ಆನಂದ್ ಅವರು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ಜುಲೈ 28ರಂದು ಬೆಳಿಗ್ಗೆ 5 ಗಂಟೆಯಲ್ಲಿ ಜಾಗಿಂಗ್ ಹೊರಟಿದ್ದರು. ಆಗ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು.</p>.<p><a href="https://www.prajavani.net/india-news/while-some-covid-cases-could-go-undetected-missing-out-on-deaths-completely-unlikely-govt-854659.html" itemprop="url">ಮರಣ ನೋಂದಣಿ ವ್ಯವಸ್ಥೆಯಿಂದ ಕೋವಿಡ್ ಸಾವಿನ ಸಂಖ್ಯೆ ಕೈತಪ್ಪದು: ಆರೋಗ್ಯ ಸಚಿವಾಲಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>