ಉತ್ತಮ್ ಆನಂದ್ ಅವರು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ಜುಲೈ 28ರಂದು ಬೆಳಿಗ್ಗೆ 5 ಗಂಟೆಯಲ್ಲಿ ಜಾಗಿಂಗ್ ಹೊರಟಿದ್ದರು. ಆಗ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು.