ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ನ್ಯಾಯಾಧೀಶನ ಹತ್ಯೆ: ತನಿಖೆ ವಹಿಸಿಕೊಂಡ ಸಿಬಿಐ

Last Updated 4 ಆಗಸ್ಟ್ 2021, 14:11 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿನ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ಪ್ರಕರಣದ ತನಿಖೆ ವಹಿಸಿಕೊಳ್ಳುವಂತೆ ಜಾರ್ಖಂಡ್‌ ಸರ್ಕಾರ ಸಲ್ಲಿಸಿದ್ದ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಕುರಿತು ಧನಬಾದ್‌ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಅನ್ನು ಸಹ ಪಡೆದುಕೊಳ್ಳಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.

ಉತ್ತಮ್ ಆನಂದ್ ಅವರು ಧನಬಾದ್ ಪಟ್ಟಣದ ಜಡ್ಜಸ್ ಕಾಲೊನಿಯಲ್ಲಿ ಜುಲೈ 28ರಂದು ಬೆಳಿಗ್ಗೆ 5 ಗಂಟೆಯಲ್ಲಿ ಜಾಗಿಂಗ್ ಹೊರಟಿದ್ದರು. ಆಗ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT