ದೇಶ್ಮುಖ್ ವಿರುದ್ಧ ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿರುವ ಆರೋಪಗಳ ತನಿಖೆ ಮಾಡುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ. ಕಾನೂನುಬದ್ಧವಾಗಿ ತನಿಖೆ ನಡೆಸಬೇಕಿದ್ದ ಸರ್ಕಾರ ಸುಮ್ಮನಾಗಿದ್ದಲ್ಲದೆ, ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಹೈಕೋರ್ಟ್ಗೆ ಮನವಿ ಸಲ್ಲಿಸಿದೆ ಎಂದು ಸಿಬಿಐ ಪರ ವಿಚಾರಣೆಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ ನ್ಯಾಯಾಲಯಕ್ಕೆ ಹೇಳಿದ್ದಾರೆ.