ಹಗರಣದಲ್ಲಿ ನನ್ನನ್ನು ಸಿಲುಕಿಸುವ ಯತ್ನ: ಸಿಸೋಡಿಯಾ

ನವದೆಹಲಿ: ‘ನನ್ನ ಮೇಲೆ ಹಗೆತನ ಸಾಧಿಸುತ್ತಿರುವ ಸಿಬಿಐ, ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಭಾನುವಾರ ದೂರಿದ್ದಾರೆ.
‘ಸಿಬಿಐ ಅಧಿಕಾರಿಗಳು ನನಗೆ ಸೇರಿದ ಕಂಪ್ಯೂಟರ್ ಜಪ್ತಿ ಮಾಡಿದ್ದು, ಅದರಲ್ಲಿ ಸಂಗ್ರಹಿಸಿಡಲಾಗಿರುವ ದಾಖಲೆಗಳನ್ನು ತಿರುಚುವ, ಅಳಿಸಿಹಾಕುವ ಸಾಧ್ಯತೆ ಇದೆ’ ಎಂದಿದ್ದಾರೆ.
ಸಿಸೋಡಿಯಾ ಆರೋಪವನ್ನು ತಳ್ಳಿ ಹಾಕಿರುವ ಸಿಬಿಐ, ನಾವು ಕಾನೂನಿನ ಪ್ರಕಾರವೇ ಶೋಧ ಕಾರ್ಯ ನಡೆಸಿದ್ದೇವೆ ಎಂದು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.