<p><strong>ನವದೆಹಲಿ</strong>: 10, 11 ಮತ್ತು 12 ತರಗತಿಗಳ ಫಲಿತಾಂಶವನ್ನು ಆಧರಿಸಿ, 30:30:40 ಸೂತ್ರವನ್ನು ಅಳವಡಿಸಿಕೊಂಡು, 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>10 ಮತ್ತು 11ನೇ ತರಗತಿಯಲ್ಲಿ ಗಳಿಸಿರುವ ಅಂಕಗಳಿಂದ ತಲಾ ಶೇ 30 ಹಾಗೂ 12ನೇ ತರಗತಿಯ ಆಂತರಿಕ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳಿಂದ ಶೇ 40ರಷ್ಟು ಅಂಕಗಳನ್ನು ಗಣನೆಗೆ ತೆಗೆದುಕೊಂಡು, 12ನೇ ತರಗತಿಯ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.</p>.<p>ಈ ಸೂತ್ರದ ಮೌಲ್ಯಮಾಪನದಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಈ ಸಾಂಕ್ರಾಮಿಕ ರೋಗದ ತೀವ್ರತೆ ಕಡಿಮೆಯಾದ ನಂತರ 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.</p>.<p>ಸಿಬಿಎಸ್ಇ ಶಿಕ್ಷಣ ಪದ್ಧತಿಯಲ್ಲಿರುವ ವಿವಾದ ಬಗೆಹರಿಸುವ ಕಾರ್ಯವಿಧಾನಕ್ಕೆ ಬರುವಂತೆ ಉನ್ನತ ನ್ಯಾಯಾಲಯವು ವೇಣುಗೋಪಾಲ್ಗೆ ತಿಳಿಸಿತು. ಇದರಿಂದ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ನೋಡಿಕೊಳ್ಳಬಹುದು ಎಂದು ಅದು ಅಭಿಪ್ರಾಯಪಟ್ಟಿತು.</p>.<p>‘ವಿದ್ಯಾರ್ಥಿಗಳ ಕಾಳಜಿಗೆ ಸಂಬಂಧಿಸಿದಂತೆ, ಅವರಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಸಮಿತಿ ರಚಿಸಲಾಗುವುದು‘ ಎಂದು ವೇಣುಗೋಪಾಲ್ ನ್ಯಾಯಪೀಠಕ್ಕೆ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 10, 11 ಮತ್ತು 12 ತರಗತಿಗಳ ಫಲಿತಾಂಶವನ್ನು ಆಧರಿಸಿ, 30:30:40 ಸೂತ್ರವನ್ನು ಅಳವಡಿಸಿಕೊಂಡು, 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>10 ಮತ್ತು 11ನೇ ತರಗತಿಯಲ್ಲಿ ಗಳಿಸಿರುವ ಅಂಕಗಳಿಂದ ತಲಾ ಶೇ 30 ಹಾಗೂ 12ನೇ ತರಗತಿಯ ಆಂತರಿಕ ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳಿಂದ ಶೇ 40ರಷ್ಟು ಅಂಕಗಳನ್ನು ಗಣನೆಗೆ ತೆಗೆದುಕೊಂಡು, 12ನೇ ತರಗತಿಯ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.</p>.<p>ಈ ಸೂತ್ರದ ಮೌಲ್ಯಮಾಪನದಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಈ ಸಾಂಕ್ರಾಮಿಕ ರೋಗದ ತೀವ್ರತೆ ಕಡಿಮೆಯಾದ ನಂತರ 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.</p>.<p>ಸಿಬಿಎಸ್ಇ ಶಿಕ್ಷಣ ಪದ್ಧತಿಯಲ್ಲಿರುವ ವಿವಾದ ಬಗೆಹರಿಸುವ ಕಾರ್ಯವಿಧಾನಕ್ಕೆ ಬರುವಂತೆ ಉನ್ನತ ನ್ಯಾಯಾಲಯವು ವೇಣುಗೋಪಾಲ್ಗೆ ತಿಳಿಸಿತು. ಇದರಿಂದ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ನೋಡಿಕೊಳ್ಳಬಹುದು ಎಂದು ಅದು ಅಭಿಪ್ರಾಯಪಟ್ಟಿತು.</p>.<p>‘ವಿದ್ಯಾರ್ಥಿಗಳ ಕಾಳಜಿಗೆ ಸಂಬಂಧಿಸಿದಂತೆ, ಅವರಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಸಮಿತಿ ರಚಿಸಲಾಗುವುದು‘ ಎಂದು ವೇಣುಗೋಪಾಲ್ ನ್ಯಾಯಪೀಠಕ್ಕೆ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>