<p><strong>ನವದೆಹಲಿ: </strong>12ನೇ ತರಗತಿ ಪೂರಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಪದವಿ ಕೋರ್ಸ್ಗೆ ತಾತ್ಕಾಲಿಕ ಪ್ರವೇಶ ಪಡೆಯುವ ಸಂಬಂಧ ಸಿಬಿಎಸ್ಇ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್, ದಿನೇಶ್ ಮಾಹೇಶ್ವರಿ, ಸಂಜೀವ್ ಖನ್ನಾ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ಸೆ. 22ರಿಂದ 29ರ ವರೆಗೆ ಪೂರಕ ಪರೀಕ್ಷೆ ನಡೆಯಲಿವೆ. ಅಷ್ಟರೊಳಗೆ ಪದವಿ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಮುಕ್ತಾಯಗೊಳ್ಳುವುದು. ಹೀಗಾಗಿ ಪೂರಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುವವರೆಗೆ ಪ್ರವೇಶ ಪ್ರಕ್ರಿಯೆ ಆರಂಭಿಸಬಾರದು. ಇಲ್ಲವೇ, ಈ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪ್ರವೇಶ ನೀಡುವಂತೆ ಕಾಲೇಜುಗಳಿಗೆ ಸಿಬಿಎಸ್ಇ ತಿಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.</p>.<p>‘ಕಾಲೇಜು, ವಿಶ್ವವಿದ್ಯಾಲಯ ಹಾಗೂ ಡೀಮ್ಡ್ ವಿ.ವಿ.ಗಳು ಪದವಿ ಕೋರ್ಸ್ಗಳಿಗೆ ಪ್ರವೇಶ ನೀಡುತ್ತವೆ. ಹೀಗಾಗಿ ಸಿಬಿಎಸ್ಇ ಈ ವಿಷಯದಲ್ಲಿ ಪೂರಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ನೆರವಿಗೆ ಧಾವಿಸಲು ಸಾಧ್ಯ ಇಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಕೋವಿಡ್–19 ಪಿಡುಗಿನ ಕಾರಣ, ಸಿಬಿಎಸ್ಇ ಹೊಸ ಮೌಲ್ಯಮಾಪನ ಪದ್ಧತಿ ಅಳವಡಿಸಿಕೊಂಡು, ಅದರನ್ವಯ ಫಲಿತಾಂಶ ಪ್ರಕಟಿಸಿದೆ. ಹೀಗಾಗಿ ಬಹಳಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಈಗ ಪೂರಕ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ’ ಎಂದು ಸಿಬಿಎಸ್ಇ ಪರ ವಕೀಲ ವಿವರಿಸಿದರು.</p>.<p>ಇದಕ್ಕೆಪ್ರತಿಕ್ರಿಯಿಸಿದ ನ್ಯಾಯಪೀಠ, ‘87,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಒದಗಿಸುವುದು ಸಿಬಿಎಸ್ಇ ವ್ಯಾಪ್ತಿಗೆ ಬರದು’ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಸೆ. 14ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>12ನೇ ತರಗತಿ ಪೂರಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಪದವಿ ಕೋರ್ಸ್ಗೆ ತಾತ್ಕಾಲಿಕ ಪ್ರವೇಶ ಪಡೆಯುವ ಸಂಬಂಧ ಸಿಬಿಎಸ್ಇ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್, ದಿನೇಶ್ ಮಾಹೇಶ್ವರಿ, ಸಂಜೀವ್ ಖನ್ನಾ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>ಸೆ. 22ರಿಂದ 29ರ ವರೆಗೆ ಪೂರಕ ಪರೀಕ್ಷೆ ನಡೆಯಲಿವೆ. ಅಷ್ಟರೊಳಗೆ ಪದವಿ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಮುಕ್ತಾಯಗೊಳ್ಳುವುದು. ಹೀಗಾಗಿ ಪೂರಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುವವರೆಗೆ ಪ್ರವೇಶ ಪ್ರಕ್ರಿಯೆ ಆರಂಭಿಸಬಾರದು. ಇಲ್ಲವೇ, ಈ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪ್ರವೇಶ ನೀಡುವಂತೆ ಕಾಲೇಜುಗಳಿಗೆ ಸಿಬಿಎಸ್ಇ ತಿಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.</p>.<p>‘ಕಾಲೇಜು, ವಿಶ್ವವಿದ್ಯಾಲಯ ಹಾಗೂ ಡೀಮ್ಡ್ ವಿ.ವಿ.ಗಳು ಪದವಿ ಕೋರ್ಸ್ಗಳಿಗೆ ಪ್ರವೇಶ ನೀಡುತ್ತವೆ. ಹೀಗಾಗಿ ಸಿಬಿಎಸ್ಇ ಈ ವಿಷಯದಲ್ಲಿ ಪೂರಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ನೆರವಿಗೆ ಧಾವಿಸಲು ಸಾಧ್ಯ ಇಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಕೋವಿಡ್–19 ಪಿಡುಗಿನ ಕಾರಣ, ಸಿಬಿಎಸ್ಇ ಹೊಸ ಮೌಲ್ಯಮಾಪನ ಪದ್ಧತಿ ಅಳವಡಿಸಿಕೊಂಡು, ಅದರನ್ವಯ ಫಲಿತಾಂಶ ಪ್ರಕಟಿಸಿದೆ. ಹೀಗಾಗಿ ಬಹಳಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಈಗ ಪೂರಕ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ’ ಎಂದು ಸಿಬಿಎಸ್ಇ ಪರ ವಕೀಲ ವಿವರಿಸಿದರು.</p>.<p>ಇದಕ್ಕೆಪ್ರತಿಕ್ರಿಯಿಸಿದ ನ್ಯಾಯಪೀಠ, ‘87,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಒದಗಿಸುವುದು ಸಿಬಿಎಸ್ಇ ವ್ಯಾಪ್ತಿಗೆ ಬರದು’ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಸೆ. 14ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>