ಆದರೆ, ಹಗರಣದ ಆರೋಪಿ ರಾಯ್ ಅವರ ಮನೆಯಿಂದ ಬಿಜೆಪಿ ನಾಯಕನಿಗೆ ಸೇರಿದ ದಾಖಲೆಗಳನ್ನು ವಶಪಡಿಸಿಕೊಂಡ ಬಳಿಕವೂ ಏಕೆ ಬಂಧಿಸಲಿಲ್ಲ? ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಚುರುಕಾಗಿವೆ. ಆದರೆ, ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.