'ಕೇಂದ್ರದ ಭದ್ರತಾ ಸಂಸ್ಥೆಯು ಭದ್ರತೆಗೆ ಒಳಪಡುವ ವ್ಯಕ್ತಿಗಿರುವ ಅಪಾಯದ ಮಟ್ಟವನ್ನು ಆಧರಿಸಿ ಕೇಂದ್ರದಿಂದ ಪಟ್ಟಿ ಸಿದ್ಧಪಡಿಸುತ್ತದೆ. ನಿರ್ದಿಷ್ಟ ಅವಧಿಗೆ ಅದನ್ನು ಪುನರ್ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಅದರ ಆಧಾರದ ಮೇಲೆ ಭದ್ರತೆಯನ್ನು ಮುಂದುವರಿಸುವುದು, ವಾಪಸ್ ಪಡೆಯುವುದು ಅಥವಾ ಬದಲಾವಣೆ ಮಾಡುವುದನ್ನು ನಿರ್ಧರಿಸಲಾಗುತ್ತದೆ. ಹೀಗಾಗಿ, ಕೇಂದ್ರದಿಂದ ಭದ್ರತೆ ಪಡೆಯುವ ವ್ಯಕ್ತಿಗಳ ಸಂಖ್ಯೆ ಆಗಾಗ್ಗೆ ವ್ಯತ್ಯಾಸವಾಗುತ್ತಿರುತ್ತದೆ. ಪ್ರಸ್ತುತ, 230 ಜನರಿಗೆ ಕೇಂದ್ರದಿಂದ ಭದ್ರತೆ ನೀಡಲಾಗಿದೆ' ಎಂದು ಸಚಿವ ಕಿಶನ್ ರೆಡ್ಡಿ ಮಾಹಿತಿ ನೀಡಿದ್ದಾರೆ.