ಮಹಾರಾಷ್ಟ್ರ | ಶಿವಸೇನಾ ಬಂಡಾಯ ಶಾಸಕರಿಗೆ ‘Y+’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಮುಂಬೈ: ಕೇಂದ್ರ ಸರ್ಕಾರವು ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್ಪಿಎಫ್ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎನ್ಎನ್ಐ’ ಟ್ವೀಟ್ ಮಾಡಿದೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಸುವಂತೆ ರಾಜಕೀಯ ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.
Ramesh Bornare,Mangesh Kudalkar, Sanjay Shirsat, Latabai Sonawane,Prakas Surve, Sadanand Saranavnkar,Yogesh Dada Kadam,Pratap Sarnaik, Yamini Jadhav,Pradeep Jaiswal,Sanjay Rathod,Dadaji Bhuse,Dilip Lande,Balaji Kalyanar,Sandipan Bhumare are provided CRPF's security cover: Sources
— ANI (@ANI) June 26, 2022
ಮಹಾರಾಷ್ಟ್ರದ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ನೇತೃತ್ವದ 40ಕ್ಕೂ ಹೆಚ್ಚು ಶಾಸಕರ ತಂಡ ಗುವಾಹಟಿಯ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಬೀಡುಬಿಟ್ಟಿದೆ.
ಇತ್ತ ಸರ್ಕಾರ ಉಳಿಸಿಕೊಳ್ಳುವುದರ ಜತೆಗೆ ಬಂಡಾಯ ಶಾಸಕರು ಬಿಸಿ ಮುಟ್ಟಿಸಲು ಮುಂದಾಗಿದ್ದ ಸಿಎಂ ಉದ್ಧವ್ ಠಾಕ್ರೆ ಶಾಸಕರಿಗೆ ಹಾಗೂ ಅವರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದರು.
ಠಾಕ್ರೆ ಅವರ ಈ ಕ್ರಮ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಓದಿ... 'ಗುವಾಹಟಿಯಲ್ಲಿ ಎಷ್ಟು ದಿನ ಅಡಗಿರುವಿರಿ'–ಶಿವಸೇನಾ ಬಂಡಾಯ ಶಾಸಕರಿಗೆ ರಾವುತ್
MVA crisis: Eknath Shinde calls meeting of rebel Sena MLAs today in Guwahati
Read @ANI Story | https://t.co/4WAdzZc0xS#MaharashtraPolitcalCrisis #MahaVikasAghadi #ShivSenaBalasaheb #ShivSenaMLAs pic.twitter.com/EEDIKJy81h
— ANI Digital (@ani_digital) June 26, 2022
ಇವನ್ನೂ ಓದಿ
* ಶಿವಸೇನಾ ಬಂಡಾಯ ಶಾಸಕರಿಗೆ ಬಿಸಿ ಮುಟ್ಟಿಸಿದ ಸಿಎಂ ಠಾಕ್ರೆ: ಏಕನಾಥ ಶಿಂಧೆ ಕೆಂಡ!
* ಮಹಾ ಸಂಕಟ | ಕಾನೂನು ಸಮರಕ್ಕೆ ಉದ್ಧವ್ ಸಿದ್ಧ
* ಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸಗೊಳಿಸಿದ ಶಿವಸೇನಾ ಕಾರ್ಯಕರ್ತರು
* ಮಹಾರಾಷ್ಟ್ರ ಬಿಕ್ಕಟ್ಟು | ಶಿವಸೇನಾದ 40ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ: ಶಿಂಧೆ
* ನಾವೇ ನಿಜವಾದ ಶಿವಸೇನಾ, ಬಾಳಾ ಸಾಹೇಬ್ ನಿಷ್ಠರು: ಬಂಡಾಯ ನಾಯಕ ಶಿಂಧೆ
* ಬಂಡಾಯ ಶಾಸಕರ ಅನರ್ಹತೆಗೆ ಕ್ರಮ: ಶಿವಸೇನಾ ನಾಯಕ ಸಂಜಯ್ ರಾವುತ್
* ಸರ್ಕಾರ ಉಳಿಸಲು ಮುಂದಾದರೆ ಪವಾರ್ ಮನೆಗೆ ಹೋಗಲು ಬಿಡಲ್ಲ ಎಂದ ಕೇಂದ್ರ ಸಚಿವ: ಆರೋಪ
* ‘ಒಬ್ಬ ದುಷ್ಟ ರಾಜ’: ಟ್ವೀಟ್ ಮೂಲಕ ಉದ್ಧವ್ ಠಾಕ್ರೆಯನ್ನು ಕೆಣಕಿದ ಅಮೃತಾ ಫಡಣವೀಸ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.