ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರ ದೆಹಲಿಯನ್ನು ಆಧುನೀಕರಿಸುತ್ತಿದೆ: ಮೋದಿ

Last Updated 19 ಜೂನ್ 2022, 19:23 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಆಧುನಿಕ ಅಭಿವೃದ್ಧಿ ಕಾರ್ಯಗಳ ಮೂಲಕ ದೆಹಲಿಯ ರೂಪವನ್ನು ಬದಲಾಯಿಸುತ್ತಿದ್ದು, ರಾಷ್ಟ್ರ ರಾಜಧಾನಿಯನ್ನು ಆಧುನೀಕರಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪ್ರತಿಪಾದಿಸಿದ್ದಾರೆ.

ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮಾರ್ಗ ಮತ್ತು ಐದು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದ ನಂತರ,‘ಕೇಂದ್ರ ಸರ್ಕಾರದ ಮೂಲಕ ದೆಹಲಿಗೆ ಉತ್ತಮ ಮೂಲಭೂತ ಸೌಕರ್ಯಗಳು ದೊರಕಿವೆ. ಈ ಯೋಜನೆಯು 55 ಲಕ್ಷ ಲೀಟರ್ ಇಂಧನ
ವನ್ನು ಉಳಿಸಲು ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ’ ಎಂದು ಹೇಳಿದರು.

ಸದ್ಯ ನಿರ್ಮಾಣವಾಗುತ್ತಿರುವ 1.6 ಕಿಮೀ ಉದ್ದದ ಸುರಂಗ ಮಾರ್ಗವು ದೆಹಲಿಯಲ್ಲೇ ಮೊದಲನೆಯದು. ದೆಹಲಿಯ ಪೂರ್ವ ಭಾಗ, ನೋಯ್ಡಾ ಮತ್ತು ಗಾಜಿಯಾಬಾದ್‌ನಿಂದ ಇಂಡಿಯಾ ಗೇಟ್ ಹಾಗೂ ದೆಹಲಿಯ ಇತರ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುತ್ತದೆ.

‘₹200 ಉಳಿಸಿದರೆ ಚರ್ಚೆಯಾಗುವುದಿಲ್ಲ’:'ಸಮಯವೇ ಹಣ, ಸರ್ಕಾರವು ಜನರಿಗೆ 100 ರೂಪಾಯಿ ಘೋಷಿಸಿದರೆ, ಅದು ಹೆಡ್‌ಲೈನ್ಸ್‌ ಆಗುತ್ತದೆ. ಆದರೆ, 200 ರೂಪಾಯಿ ಉಳಿಸಿದರೆ, ಅದರ ಬಗ್ಗೆ ಹೆಚ್ಚು ಚರ್ಚೆಯೇ ಆಗುವುದಿಲ್ಲ' ಎಂದರು.

ಸುರಂಗ ಮತ್ತು ಅಂಡರ್‌ಪಾಸ್‌ಗಳಲ್ಲಿ ಮೂಡಿಸಿರುವ ಚಿತ್ರಕಲೆಯ ಚಿತ್ತಾರದ ಕುರಿತು ಪ್ರಸ್ತಾಪಿಸಿದ ಅವರು, ಭಾನುವಾರದಂದು ಕೆಲವು ಗಂಟೆಗಳ ಕಾಲ ವಾಹನಗಳ ಸಂಚಾರವನ್ನು ನಿಲ್ಲಿಸಬೇಕು. ಆ ಮೂಲಕ ಜನರು ಇಲ್ಲಿರುವ ಕಲಾಕೃತಿಗಳನ್ನು ನೋಡುತ್ತ ಓಡಾಡಲು ಅವಕಾಶ ಮಾಡಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT