<p><strong>ನವದೆಹಲಿ:</strong> 'ಸೆಂಟ್ರಲ್ ವಿಸ್ತಾ' ಒಂದು 'ಪ್ರಮುಖ ಮತ್ತು ಅಗತ್ಯ' ರಾಷ್ಟ್ರೀಯ ಯೋಜನೆಯಾಗಿದ್ದು, ಆ ಯೋಜನೆಯಡಿ ನಡೆಯುತ್ತಿರುವ ನಿರ್ಮಾಣ ಕಾರ್ಯವನ್ನು ಮುಂದುವರಿಸಲು ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದ್ದು ಕಾಮಗಾರಿ ರದ್ಧತಿ ಕೋರಿದ್ದ ಅರ್ಜಿದಾರರಿಗೆ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.</p>.<p>ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ, ಇದೊಂದು ಪ್ರಚೋದಿತ (ಮೋಟಿವೇಟೆಡ್ ಪ್ಲೀ) ಅರ್ಜಿಯಾಗಿದ್ದು, ಇದರಲ್ಲಿ ನಿಜವಾದ ಸಾರ್ವಜನಿಕ ಹಿತಾಸಕ್ತಿಯಿಲ್ಲ‘ ಎಂದು ಹೇಳಿತು. ಜತೆಗೆ, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿತು.</p>.<p><strong>ಇದನ್ನೂ ಓದಿ:<a href="https://www.prajavani.net/india-news/high-court-to-hear-plea-against-central-vista-project-on-tuesday-covid-829478.html">ಸೆಂಟ್ರಲ್ ವಿಸ್ತಾ ನಿರ್ಮಾಣಕ್ಕೆ ತಡೆ:ದೆಹಲಿ ಹೈಕೋರ್ಟ್ನಿಂದ ವಿಚಾರಣೆ</a></strong></p>.<p>ಶಾಪೂರ್ಜಿ ಪಲ್ಲೊಂಜಿ ಗ್ರೂಪ್ಗೆ ನೀಡಲಾದ ಒಪ್ಪಂದದ ಪ್ರಕಾರ, ನವೆಂಬರ್ 2021 ರೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಮತ್ತು ಅದನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.</p>.<p>ಯೋಜನೆಯ ಕಾನೂನು ಬದ್ಧತೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ಎತ್ತಿಹಿಡಿದಿದೆ ಎಂದು ನ್ಯಾಯಪೀಠ ಹೇಳಿತು.</p>.<p><strong>ಇದನ್ನೂ ಓದಿ:<a href="https://www.prajavani.net/india-news/country-needs-breath-not-pms-residence-says-rahul-gandhi-829234.html">ದೇಶದ ಜನರಿಗೆ ಉಸಿರಾಡುವುದು ಬೇಕಿದೆ, ಪ್ರಧಾನಿ ನಿವಾಸವಲ್ಲ: ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಸೆಂಟ್ರಲ್ ವಿಸ್ತಾ' ಒಂದು 'ಪ್ರಮುಖ ಮತ್ತು ಅಗತ್ಯ' ರಾಷ್ಟ್ರೀಯ ಯೋಜನೆಯಾಗಿದ್ದು, ಆ ಯೋಜನೆಯಡಿ ನಡೆಯುತ್ತಿರುವ ನಿರ್ಮಾಣ ಕಾರ್ಯವನ್ನು ಮುಂದುವರಿಸಲು ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದ್ದು ಕಾಮಗಾರಿ ರದ್ಧತಿ ಕೋರಿದ್ದ ಅರ್ಜಿದಾರರಿಗೆ ನ್ಯಾಯಾಲಯ ₹1 ಲಕ್ಷ ದಂಡ ವಿಧಿಸಿದೆ.</p>.<p>ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ, ಇದೊಂದು ಪ್ರಚೋದಿತ (ಮೋಟಿವೇಟೆಡ್ ಪ್ಲೀ) ಅರ್ಜಿಯಾಗಿದ್ದು, ಇದರಲ್ಲಿ ನಿಜವಾದ ಸಾರ್ವಜನಿಕ ಹಿತಾಸಕ್ತಿಯಿಲ್ಲ‘ ಎಂದು ಹೇಳಿತು. ಜತೆಗೆ, ಅರ್ಜಿದಾರರಿಗೆ ₹1 ಲಕ್ಷ ದಂಡ ವಿಧಿಸಿತು.</p>.<p><strong>ಇದನ್ನೂ ಓದಿ:<a href="https://www.prajavani.net/india-news/high-court-to-hear-plea-against-central-vista-project-on-tuesday-covid-829478.html">ಸೆಂಟ್ರಲ್ ವಿಸ್ತಾ ನಿರ್ಮಾಣಕ್ಕೆ ತಡೆ:ದೆಹಲಿ ಹೈಕೋರ್ಟ್ನಿಂದ ವಿಚಾರಣೆ</a></strong></p>.<p>ಶಾಪೂರ್ಜಿ ಪಲ್ಲೊಂಜಿ ಗ್ರೂಪ್ಗೆ ನೀಡಲಾದ ಒಪ್ಪಂದದ ಪ್ರಕಾರ, ನವೆಂಬರ್ 2021 ರೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಮತ್ತು ಅದನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.</p>.<p>ಯೋಜನೆಯ ಕಾನೂನು ಬದ್ಧತೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ಎತ್ತಿಹಿಡಿದಿದೆ ಎಂದು ನ್ಯಾಯಪೀಠ ಹೇಳಿತು.</p>.<p><strong>ಇದನ್ನೂ ಓದಿ:<a href="https://www.prajavani.net/india-news/country-needs-breath-not-pms-residence-says-rahul-gandhi-829234.html">ದೇಶದ ಜನರಿಗೆ ಉಸಿರಾಡುವುದು ಬೇಕಿದೆ, ಪ್ರಧಾನಿ ನಿವಾಸವಲ್ಲ: ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>