<p class="title"><strong>ತಿರುವನಂತಪುರ:</strong> ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿಗೆ ಕೇರಳಕ್ಕೆ ₹ 267.35 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.</p>.<p class="title">ಕೋವಿಡ್ -19 ಪರಿಸ್ಥಿತಿಯ ಪರಿಶೀಲನೆ ನಡೆಸಲು ಕೇಂದ್ರ ಆರೋಗ್ಯ ಸಚಿವರ ನೇತೃತ್ವದ ತಂಡ ಸೋಮವಾರ ಕೇರಳಕ್ಕೆ ಭೇಟಿ ನೀಡಿದ್ದು, ರಾಜ್ಯಕ್ಕೆ ಹೆಚ್ಚಿನ ಡೋಸ್ ಲಸಿಕೆಯನ್ನು ವಿತರಿಸುವ ಭರವಸೆ ನೀಡಿದೆ.</p>.<p class="title">ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರನ್ನು ಭೇಟಿ ಮಾಡಿ ಕೇಂದ್ರ ಸಚಿವರು ಚರ್ಚೆ ನಡೆಸಿದ್ದರು.</p>.<p class="title">ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ‘ಕೋವಿಡ್ ನಿರ್ವಹಣೆಗೆ ₹ 267.35 ಕೋಟಿ ಪ್ಯಾಕೇಜ್ ಜೊತೆಗೆ ಕೇರಳದ ಪ್ರತಿ ಜಿಲ್ಲೆಯಲ್ಲಿ ಔಷಧ ದಾಸ್ತಾನು ಕೇಂದ್ರ ಪ್ರಾರಂಭಿಸಲು ಹೆಚ್ಚುವರಿಯಾಗಿ ಒಂದು ಕೋಟಿ ರೂಪಾಯಿ ನೀಡಲಾಗುವುದು. ಕೇರಳಕ್ಕೆ ಸಾಧ್ಯವಿರುವ ಎಲ್ಲ ಬಗೆಯ ಸಹಾಯ ಮಾಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p>.<p>ಮಕ್ಕಳ ಆರೋಗ್ಯಕ್ಕಾಗಿ, ಜಿಲ್ಲಾ ಆಸ್ಪತ್ರೆಗಳಲ್ಲಿ 10 ಕಿಲೋ ಲೀಟರ್ ದ್ರವ ಆಮ್ಲಜನಕ ಸಂಗ್ರಹ ಸಾಮರ್ಥ್ಯದ ಟ್ಯಾಂಕ್ ಸೌಲಭ್ಯದೊಂದಿಗೆ ಮಕ್ಕಳ ಐಸಿಯು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.</p>.<p><strong>ಕೋವಿಡ್ ನಿರ್ವಹಣೆಗೆ ಶ್ಲಾಘನೆ:</strong>ರಾಜ್ಯದಲ್ಲಿ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಶ್ಲಾಘಿಸಿದ್ದು,ಲಸಿಕೆ ಪೋಲು ಮಾಡದಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ತಿರುವನಂತಪುರ:</strong> ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿಗೆ ಕೇರಳಕ್ಕೆ ₹ 267.35 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.</p>.<p class="title">ಕೋವಿಡ್ -19 ಪರಿಸ್ಥಿತಿಯ ಪರಿಶೀಲನೆ ನಡೆಸಲು ಕೇಂದ್ರ ಆರೋಗ್ಯ ಸಚಿವರ ನೇತೃತ್ವದ ತಂಡ ಸೋಮವಾರ ಕೇರಳಕ್ಕೆ ಭೇಟಿ ನೀಡಿದ್ದು, ರಾಜ್ಯಕ್ಕೆ ಹೆಚ್ಚಿನ ಡೋಸ್ ಲಸಿಕೆಯನ್ನು ವಿತರಿಸುವ ಭರವಸೆ ನೀಡಿದೆ.</p>.<p class="title">ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರನ್ನು ಭೇಟಿ ಮಾಡಿ ಕೇಂದ್ರ ಸಚಿವರು ಚರ್ಚೆ ನಡೆಸಿದ್ದರು.</p>.<p class="title">ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ‘ಕೋವಿಡ್ ನಿರ್ವಹಣೆಗೆ ₹ 267.35 ಕೋಟಿ ಪ್ಯಾಕೇಜ್ ಜೊತೆಗೆ ಕೇರಳದ ಪ್ರತಿ ಜಿಲ್ಲೆಯಲ್ಲಿ ಔಷಧ ದಾಸ್ತಾನು ಕೇಂದ್ರ ಪ್ರಾರಂಭಿಸಲು ಹೆಚ್ಚುವರಿಯಾಗಿ ಒಂದು ಕೋಟಿ ರೂಪಾಯಿ ನೀಡಲಾಗುವುದು. ಕೇರಳಕ್ಕೆ ಸಾಧ್ಯವಿರುವ ಎಲ್ಲ ಬಗೆಯ ಸಹಾಯ ಮಾಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p>.<p>ಮಕ್ಕಳ ಆರೋಗ್ಯಕ್ಕಾಗಿ, ಜಿಲ್ಲಾ ಆಸ್ಪತ್ರೆಗಳಲ್ಲಿ 10 ಕಿಲೋ ಲೀಟರ್ ದ್ರವ ಆಮ್ಲಜನಕ ಸಂಗ್ರಹ ಸಾಮರ್ಥ್ಯದ ಟ್ಯಾಂಕ್ ಸೌಲಭ್ಯದೊಂದಿಗೆ ಮಕ್ಕಳ ಐಸಿಯು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.</p>.<p><strong>ಕೋವಿಡ್ ನಿರ್ವಹಣೆಗೆ ಶ್ಲಾಘನೆ:</strong>ರಾಜ್ಯದಲ್ಲಿ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಶ್ಲಾಘಿಸಿದ್ದು,ಲಸಿಕೆ ಪೋಲು ಮಾಡದಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>