<p><strong>ನವದೆಹಲಿ: </strong>ಕೋವಿಡ್ ಎರಡನೇ ಅಲೆಯ ಸಂದರ್ಭ ಉಂಟಾದ ಸಮಸ್ಯೆಗಳನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ₹ 23,000 ಕೋಟಿ ಪ್ಯಾಕೇಜ್ ನೀಡಲಾಗುವುದು ಎಂದು ನೂತನ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.</p>.<p>ಈ ಹಣವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಕೆ ಮಾಡುತ್ತವೆ. ₹ 23,000ಕೋಟಿಯಲ್ಲಿ ಸುಮಾರು ₹ 15,000 ಕೋಟಿಯನ್ನು ಕೇಂದ್ರದಿಂದ ಬಳಕೆ ಮಾಡಲಾಗುವುದು ಮತ್ತು ₹ 8,000 ಕೋಟಿಯನ್ನು ರಾಜ್ಯಗಳು ವಿನಿಯೋಗಿಸಲಿವೆ ಎಂದು ಅವರು ಹೇಳಿದರು.</p>.<p>ಮುಂದಿನ ಒಂಬತ್ತು ತಿಂಗಳ ಅವಧಿಯ ಕಾರ್ಯ ತಂತ್ರ ಪ್ರಕಟಿಸಿದ ಅವರು, ಈ ಅವಧಿಯಲ್ಲಿ ನಾವು ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಾಗಿದೆ. ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವುದು ನಮ್ಮ ಕೆಲಸವಾಗಿದೆ ಎಂದು ಮಾಂಡವಿಯಾ ತಿಳಿಸಿದರು.</p>.<p>ಇದೇವೇಳೆ, ಕೋವಿಡ್ ಮೂರನೆ ಅಲೆ ಎದುರಿಸಲು ದೇಶದ 736 ಜಿಲ್ಲೆಗಳಲ್ಲಿ ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು. ಕೋವಿಡ್ ಪರಿಹಾರ ನಿಧಿಯಡಿ 20,000 ಐಸಿಯು ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/health/mankind-pharma-gets-drdo-nod-to-manufacture-and-market-covid-drug-2-dg-846230.html"><strong>ಕೋವಿಡ್: 2–ಡಿಜಿ ಔಷಧ ಉತ್ಪಾದನೆ, ಮಾರಾಟಕ್ಕೆ ಮ್ಯಾನ್ಕೈಂಡ್ ಫಾರ್ಮಾಗೆ ಪರವಾನಗಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್ ಎರಡನೇ ಅಲೆಯ ಸಂದರ್ಭ ಉಂಟಾದ ಸಮಸ್ಯೆಗಳನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ₹ 23,000 ಕೋಟಿ ಪ್ಯಾಕೇಜ್ ನೀಡಲಾಗುವುದು ಎಂದು ನೂತನ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.</p>.<p>ಈ ಹಣವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಕೆ ಮಾಡುತ್ತವೆ. ₹ 23,000ಕೋಟಿಯಲ್ಲಿ ಸುಮಾರು ₹ 15,000 ಕೋಟಿಯನ್ನು ಕೇಂದ್ರದಿಂದ ಬಳಕೆ ಮಾಡಲಾಗುವುದು ಮತ್ತು ₹ 8,000 ಕೋಟಿಯನ್ನು ರಾಜ್ಯಗಳು ವಿನಿಯೋಗಿಸಲಿವೆ ಎಂದು ಅವರು ಹೇಳಿದರು.</p>.<p>ಮುಂದಿನ ಒಂಬತ್ತು ತಿಂಗಳ ಅವಧಿಯ ಕಾರ್ಯ ತಂತ್ರ ಪ್ರಕಟಿಸಿದ ಅವರು, ಈ ಅವಧಿಯಲ್ಲಿ ನಾವು ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಾಗಿದೆ. ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವುದು ನಮ್ಮ ಕೆಲಸವಾಗಿದೆ ಎಂದು ಮಾಂಡವಿಯಾ ತಿಳಿಸಿದರು.</p>.<p>ಇದೇವೇಳೆ, ಕೋವಿಡ್ ಮೂರನೆ ಅಲೆ ಎದುರಿಸಲು ದೇಶದ 736 ಜಿಲ್ಲೆಗಳಲ್ಲಿ ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು. ಕೋವಿಡ್ ಪರಿಹಾರ ನಿಧಿಯಡಿ 20,000 ಐಸಿಯು ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>ಇದನ್ನೂ ಓದಿ.. <a href="https://www.prajavani.net/health/mankind-pharma-gets-drdo-nod-to-manufacture-and-market-covid-drug-2-dg-846230.html"><strong>ಕೋವಿಡ್: 2–ಡಿಜಿ ಔಷಧ ಉತ್ಪಾದನೆ, ಮಾರಾಟಕ್ಕೆ ಮ್ಯಾನ್ಕೈಂಡ್ ಫಾರ್ಮಾಗೆ ಪರವಾನಗಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>