ನವದೆಹಲಿ: ‘ಕೋವಿಡ್ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಇಳಿಕೆಯ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗೆ ಮುಂದಾಗಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು, ಎಚ್ಚರಿಕೆಯಿಂದ ನಿರ್ಬಂಧ ಸಡಿಲಿಸುವ ಜತೆಗೆ, ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಲಸಿಕೆ (‘ಟೆಸ್ಟ್–ಟ್ರ್ಯಾಕ್–ಟ್ರೀಟ್–ವ್ಯಾಕ್ಸಿನೇಷನ್‘) ಎಂಬ ನಾಲ್ಕು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಬೇಕು‘ ಎಂದು ಕೇಂದ್ರ ಗೃಹಸಚಿವಾಲಯ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.