<p class="title"><strong>ನವದೆಹಲಿ:</strong> ಕುಡಿಯುವ ಉದ್ದೇಶಕ್ಕಾಗಿ ಗ್ರಾಮಗಳಿಗೆ ಪೂರೈಸುತ್ತಿರುವ ನೀರು ಗುಣಮಟ್ಟದ್ದಾಗಿದೆ ಎಂಬುದರ ಖಾತರಿಗಾಗಿ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸೂಚನೆ ನೀಡಿದೆ.</p>.<p class="title">ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜಲಜೀವನ ಮಿಷನ್ (ಎನ್ಜೆಜೆಎಂ) ಇದಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.</p>.<p class="title">ದೇಶದಾದ್ಯಂತ ಎಲ್ಲ ಗ್ರಾಮಗಳಲ್ಲಿ ನೀರಿನ ಪರೀಕ್ಷೆ ನಡೆಸಬೇಕು. ಸಾರ್ವಜನಿಕರು ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಗುಣಮಟ್ಟದ ನೀರು ಪೂರೈಕೆಯಾಗುತ್ತಿದೆ ಎಂಬ ಬಗ್ಗೆ ಕ್ರಮವಹಿಸಬೇಕು ಎಂದು ಸಲಹೆ ಮಾಡಿದೆ.</p>.<p>ಹಲವು ನದಿಗಳಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಶವಗಳು ಹಾಗೂ ಭಾಗಶಃ ಸುಟ್ಟ ದೇಹಗಳು ತೇಲುತ್ತಿವೆ ಎಂಬ ಬೆಳವಣಿಗೆಯ ಹಿಂದೆಯೇ ಸಚಿವಾಲಯದ ಈ ಸಲಹೆ ಹೊರಬಿದ್ದಿದೆ.</p>.<p>ನದಿಯಲ್ಲಿ ಹೆಣಗಳು ತೇಲುತ್ತಿರುವ ಪ್ರಕರಣ ವರದಿಯಾದ ಬಳಿಕ, ಇದರಿಂದಾಗಿ ನೀರು ಕಲುಷಿತಗೊಂಡು ಸೋಂಕು ಸಾಂಕ್ರಾಮಿಕವಾಗಿ ಹರಡಬಹುದು ಎಂದು ಆರೋಗ್ಯ ಪರಿಣತರು ಎಚ್ಚರಿಸಿದ್ದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ನೀರು ಪೂರೈಕೆಯನ್ನು ಖಾತರಿಪಡಿಸಿಕೊಳ್ಳುವುದು ಅಗತ್ಯ. ಸ್ಯಾನಿಟೈಸ್ ವ್ಯವಸ್ಥೆ ಉತ್ತಮಪಡಿಸುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಸಚಿವಾಲಯವು ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕುಡಿಯುವ ಉದ್ದೇಶಕ್ಕಾಗಿ ಗ್ರಾಮಗಳಿಗೆ ಪೂರೈಸುತ್ತಿರುವ ನೀರು ಗುಣಮಟ್ಟದ್ದಾಗಿದೆ ಎಂಬುದರ ಖಾತರಿಗಾಗಿ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸೂಚನೆ ನೀಡಿದೆ.</p>.<p class="title">ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜಲಜೀವನ ಮಿಷನ್ (ಎನ್ಜೆಜೆಎಂ) ಇದಕ್ಕೆ ಸಂಬಂಧಿಸಿದಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.</p>.<p class="title">ದೇಶದಾದ್ಯಂತ ಎಲ್ಲ ಗ್ರಾಮಗಳಲ್ಲಿ ನೀರಿನ ಪರೀಕ್ಷೆ ನಡೆಸಬೇಕು. ಸಾರ್ವಜನಿಕರು ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಗುಣಮಟ್ಟದ ನೀರು ಪೂರೈಕೆಯಾಗುತ್ತಿದೆ ಎಂಬ ಬಗ್ಗೆ ಕ್ರಮವಹಿಸಬೇಕು ಎಂದು ಸಲಹೆ ಮಾಡಿದೆ.</p>.<p>ಹಲವು ನದಿಗಳಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಶವಗಳು ಹಾಗೂ ಭಾಗಶಃ ಸುಟ್ಟ ದೇಹಗಳು ತೇಲುತ್ತಿವೆ ಎಂಬ ಬೆಳವಣಿಗೆಯ ಹಿಂದೆಯೇ ಸಚಿವಾಲಯದ ಈ ಸಲಹೆ ಹೊರಬಿದ್ದಿದೆ.</p>.<p>ನದಿಯಲ್ಲಿ ಹೆಣಗಳು ತೇಲುತ್ತಿರುವ ಪ್ರಕರಣ ವರದಿಯಾದ ಬಳಿಕ, ಇದರಿಂದಾಗಿ ನೀರು ಕಲುಷಿತಗೊಂಡು ಸೋಂಕು ಸಾಂಕ್ರಾಮಿಕವಾಗಿ ಹರಡಬಹುದು ಎಂದು ಆರೋಗ್ಯ ಪರಿಣತರು ಎಚ್ಚರಿಸಿದ್ದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ನೀರು ಪೂರೈಕೆಯನ್ನು ಖಾತರಿಪಡಿಸಿಕೊಳ್ಳುವುದು ಅಗತ್ಯ. ಸ್ಯಾನಿಟೈಸ್ ವ್ಯವಸ್ಥೆ ಉತ್ತಮಪಡಿಸುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಸಚಿವಾಲಯವು ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>