ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿದ ತಾಪ: ಆರೋಗ್ಯ ಸೌಲಭ್ಯ ಸಿದ್ಧತೆ ಪರಿಶೀಲನೆಗೆ ರಾಜ್ಯಗಳಿಗೆ ಕೇಂದ್ರ ಸೂಚನೆ

Last Updated 1 ಮೇ 2022, 15:48 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ತಾಪ ಮತ್ತು ಬಿಸಿಗಾಳಿ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಬೆನ್ನಲ್ಲೇ, ಆರೋಗ್ಯ ಸೌಲಭ್ಯದಬಗ್ಗೆ ಪರಿಶೀಲಿಸಿಕೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈ ಸಂಬಂಧ ಶನಿವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ತಾಪಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ಕುರಿತಾದ ರಾಷ್ಟ್ರೀಯ ಕಾರ್ಯ ಯೋಜನೆಯ ಮಾರ್ಗಸೂಚಿಗಳ ಮಾಹಿತಿಯನ್ನು ಜಿಲ್ಲೆಗಳ ಜೊತೆ ಹಂಚಿಕೊಳ್ಳುವಂತೆ ಸೂಚಿಸಿದ್ದಾರೆ.

ಏಕಾಂಗಿಯಾಗಿರುವ ಹಿರಿಯ ನಾಗರಿಕರು ಅಥವಾ ಕಾಯಿಲೆ ಪೀಡಿತರ ಆರೋಗ್ಯದ ಮೇಲೆ ಪ್ರತಿನಿತ್ಯ ನಿಗಾ ವಹಿಸಬೇಕು.ಅಲ್ಲದೆ, ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಮಾತ್ರೆಗಳು, ಕುಡಿಯುವ ನೀರು ಮತ್ತು ಅತಿಹೆಚ್ಚು ತಾಪ ಇರುವ ಪ್ರದೇಶಗಳಲ್ಲಿ ಕೂಲಿಂಗ್ ಸಾಧನಗಳು ನಿರಂತರವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.ಮುಂದಿನ 3-4 ದಿನಗಳ ದೈನಂದಿನ ತಾಪಮಾನದ ಬಗ್ಗೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮತ್ತು ಎನ್‌ಸಿಡಿಸಿ ನೀಡಿರುವ ಎಚ್ಚರಿಕೆಗಳನ್ನು ರಾಜ್ಯಗಳ ಜೊತೆ ಹಂಚಿಕೊಳ್ಳಲಾಗಿದೆಎಂದು ಭೂಷಣ್ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT