<p class="bodytext"><strong>ನವದೆಹಲಿ(ಪಿಟಿಐ):</strong> ದೇಶದಲ್ಲಿನ ಗಂಭೀರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮುಂದಿನ ಮೂರು ವಾರಗಳವರೆಗೆ ಕೋವಿಡ್ -19 ಪರೀಕ್ಷೆ ಹೆಚ್ಚಿಸಲು ಮತ್ತು ಪ್ರಯೋಗಾಲಯ ಹಾಗೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಲು ಕೇಂದ್ರ ಸರ್ಕಾರ ಮಂಗಳವಾರ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.</p>.<p class="bodytext">ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳ ಉನ್ನತ ಅಧಿಕಾರಿಗಳಿಗೆ ಈ ಸೂಚನೆ ನೀಡಲಾಯಿತು.</p>.<p class="bodytext">ಕೋವಿಡ್ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿದ ನಂತರ, ಕೇಂದ್ರ ಗೃಹ ಕಾರ್ಯದರ್ಶಿಯವರು, ಕೇಂದ್ರ ಪ್ರಾಂತ್ಯಗಳಲ್ಲಿನ ಗಂಭೀರ ಪರಿಸ್ಥಿತಿಯ ವಿರುದ್ಧ ನಿರಂತರ ಜಾಗರೂಕತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p class="bodytext">ವೈದ್ಯಕೀಯ ನಿರ್ವಹಣೆಯ ತುರ್ತು ಪರಿಶೀಲನೆ ನಡೆಸುವಂತೆ ಶಿಫಾರಸು ಮಾಡಿದ ಕೇಂದ್ರದ ಅಧಿಕಾರಿಗಳು, ಕೋವಿಡ್ ಪರಿಕ್ಷೆಗೆ ರ್ಯಾಪಿಡ್ ಟೆಸ್ಟ್, ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.</p>.<p>ದೊಡ್ಡ ಸಂಖ್ಯೆಯಲ್ಲಿ ಜನಸಂದಣಿ ಸೇರುವುದನ್ನು ನಿಷೇಧಿಸಬೇಕು, ಚಳವಳಿಗಳನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಹಾಗೂ ಮಾರುಕಟ್ಟೆಗಳಿಗೆ ನಿಗದಿತ ಸಮಯ ನಿಗದಿಪಡಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ(ಪಿಟಿಐ):</strong> ದೇಶದಲ್ಲಿನ ಗಂಭೀರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮುಂದಿನ ಮೂರು ವಾರಗಳವರೆಗೆ ಕೋವಿಡ್ -19 ಪರೀಕ್ಷೆ ಹೆಚ್ಚಿಸಲು ಮತ್ತು ಪ್ರಯೋಗಾಲಯ ಹಾಗೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಲು ಕೇಂದ್ರ ಸರ್ಕಾರ ಮಂಗಳವಾರ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.</p>.<p class="bodytext">ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳ ಉನ್ನತ ಅಧಿಕಾರಿಗಳಿಗೆ ಈ ಸೂಚನೆ ನೀಡಲಾಯಿತು.</p>.<p class="bodytext">ಕೋವಿಡ್ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿದ ನಂತರ, ಕೇಂದ್ರ ಗೃಹ ಕಾರ್ಯದರ್ಶಿಯವರು, ಕೇಂದ್ರ ಪ್ರಾಂತ್ಯಗಳಲ್ಲಿನ ಗಂಭೀರ ಪರಿಸ್ಥಿತಿಯ ವಿರುದ್ಧ ನಿರಂತರ ಜಾಗರೂಕತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p class="bodytext">ವೈದ್ಯಕೀಯ ನಿರ್ವಹಣೆಯ ತುರ್ತು ಪರಿಶೀಲನೆ ನಡೆಸುವಂತೆ ಶಿಫಾರಸು ಮಾಡಿದ ಕೇಂದ್ರದ ಅಧಿಕಾರಿಗಳು, ಕೋವಿಡ್ ಪರಿಕ್ಷೆಗೆ ರ್ಯಾಪಿಡ್ ಟೆಸ್ಟ್, ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.</p>.<p>ದೊಡ್ಡ ಸಂಖ್ಯೆಯಲ್ಲಿ ಜನಸಂದಣಿ ಸೇರುವುದನ್ನು ನಿಷೇಧಿಸಬೇಕು, ಚಳವಳಿಗಳನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಹಾಗೂ ಮಾರುಕಟ್ಟೆಗಳಿಗೆ ನಿಗದಿತ ಸಮಯ ನಿಗದಿಪಡಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>