ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ನೀಡಿದ ಮಾಹಿತಿಯಲ್ಲಿ ಕೇಂದ್ರವು ‘ಸಾರ್ವಜನಿಕ ಆರೋಗ್ಯ ಜಾಗೃತಿಯು ಹೆಚ್ಚು ಕೇಂದ್ರೀಕೃತ ಮತ್ತು ಕಠಿಣವಾಗಬೇಕಿದೆ’ಎಂದು ಹೇಳಿದ್ದಾರೆ. ‘ಜನಸಂದಣಿ, ಪರಸ್ಪರ ಬೆರೆಯುವುದನ್ನು ತಡೆಯುವುದು, ವ್ಯಾಪಕವಾದ ಪರೀಕ್ಷೆ, ಟ್ರೇಸಿಂಗ್ ಮತ್ತು ಹೆಚ್ಚು ಲಸಿಕೆ ವಿತರಣೆಗೆ ಆದ್ಯತೆಯ ಆಧಾರದ ಮೇಲೆ ತಕ್ಷಣದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಿ’ಎಂದು ಅವರು ಹೇಳಿದ್ದಾರೆ.