‘ಪ್ರತಿಭಟನಕಾರರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಾಗುವುದು, ಆಂದೋಲನದ ಸಮಯದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಆರ್ಥಿಕ ಪರಿಹಾರವನ್ನು ನೀಡಲಾಗುವುದು, ರೈತರನ್ನು ವಿದ್ಯುತ್ ಬಿಲ್ಗಳ ವ್ಯಾಪ್ತಿಯಿಂದ ದೂರವಿಡಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ನ ವಕ್ತಾರ ರಾಕೇಶ್ ಟಿಕಾಯತ್ ಅವರಿಗೆ ಭರವಸೆ ನೀಡಲಾಗಿತ್ತು. ಪ್ರಧಾನಿ ಅವರು 2021ರ ನ.19ರಂದು ಎಂಎಸ್ಪಿ ಖಾತರಿಪಡಿಸಲು ಸಮಿತಿ ರಚನೆ ಮಾಡಲಾಗುವುದು ಎಂದು ಘೋಷಿಸಿದ್ದರು. ಆದರೆ, ಇದುವರೆಗೆ ಕೇಂದ್ರ ಸರ್ಕಾರ ಯಾವ ಸಮಿತಿಯನ್ನೂ ರಚನೆ ಮಾಡಿಲ್ಲ’ ಎಂದು ಶರ್ಮಾ ತಿಳಿಸಿದರು.