<p><strong>ನವದೆಹಲಿ: </strong>ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (ಇಡಬ್ಲ್ಯೂಎಸ್)ನಿಗದಿಪಡಿಸಿರುವ ವಾರ್ಷಿಕ ₹ 8 ಲಕ್ಷ ಆದಾಯ ಮಿತಿಯನ್ನು ಪರಿಷ್ಕರಿಸಲು ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಕೇಂದ್ರ ಸರ್ಕಾರ ಮಂಗಳವಾರ ರಚಿಸಿದೆ.</p>.<p>ಹಣಕಾಸು ಸಚಿವಾಲಯದ ಮಾಜಿ ಕಾರ್ಯದರ್ಶಿ ಅಜಯಭೂಷಣ್ ಪಾಂಡೆ, ಭಾರತೀಯ ಸಮಾಜವಿಜ್ಞಾನ ಸಂಶೋಧನಾ ಪರಿಷತ್ತಿನ ಸದಸ್ಯ ಕಾರ್ಯದರ್ಶಿ ವಿ.ಕೆ.ಮಲ್ಹೋತ್ರ ಹಾಗೂ ಪ್ರಧಾನ ಆರ್ಥಿಕ ಸಲಹೆಗಾರ ಸಂಜಯ್ ಸನ್ಯಾಲ್ ಅವರು ಈ ಸಮಿತಿಯಲ್ಲಿ ಇದ್ದಾರೆ.</p>.<p>ಮೂರು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯ ಸಮಿತಿಗೆ ಸೂಚಿಸಿದೆ.</p>.<p>‘ಆರ್ಥಿಕವಾಗಿ ಹಿಂದುಳಿದ ವರ್ಗವನ್ನು ಗುರುತಿಸಲು ವಿವಿಧ ರಾಜ್ಯಗಳಲ್ಲಿ ಅನುಸರಿಸಲಾಗುತ್ತಿರುವ ವಿಧಾನಗಳನ್ನು ಈ ತ್ರಿಸದಸ್ಯ ಸಮಿತಿ ಪರಿಶೀಲನೆ ನಡೆಸುವುದು ಹಾಗೂ ಈ ಉದ್ದೇಶಕ್ಕಾಗಿ ಭವಿಷ್ಯದಲ್ಲಿ ಅಳವಡಿಸಿಕೊಳ್ಳಬೇಕಾದ ಮಾನದಂಡಗಳ ಕುರಿತು ಶಿಫಾರಸು ಮಾಡುವುದು’ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.</p>.<p>‘ಆದಾಯ ಮಿತಿ ಮಾನದಂಡ ಪರಿಷ್ಕರಿಸಲು ಸಮಿತಿ ರಚಿಸಲಾಗುವುದು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು,ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್, ವಿಕ್ರಂ ನಾಥ್ ಅವರಿದ್ದ ಪೀಠಕ್ಕೆ ನ. 25ರಂದು ತಿಳಿಸಿದ್ದರು.</p>.<p>ಅಖಿಲ ಭಾರತ ಕೋಟಾ ಸೀಟುಗಳಿಗೆ ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಮೀಸಲಾತಿ ಸಿಂಧುತ್ವ ಕುರಿತು ತೀರ್ಮಾನ ಕೈಗೊಳ್ಳುವವರೆಗೂನೀಟ್–ಪಿ.ಜಿ ಕೌನ್ಸೆಲಿಂಗ್ ಮುಂದೂಡಬೇಕು ಎಂದು ಸುಪ್ರೀಂಕೋರ್ಟ್ ಕಳೆದ ಅಕ್ಟೋಬರ್ 25ರಂದು ಕೇಂದ್ರಕ್ಕೆ ನಿರ್ದೇಶಿಸಿತ್ತು.</p>.<p>ಸಂವಿಧಾನದ 15ನೇ ವಿಧಿ ಅನ್ವಯ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ 10ರಷ್ಟು ಮೀಸಲಾತಿ ಘೋಷಿಸಿದ್ದ ಕೇಂದ್ರ ಸರ್ಕಾರ, ಈ ಸೌಲಭ್ಯ ಪಡೆಯಲು 2019ರ ಜನವರಿ 17ರಂದು ಆದಾಯ ಮಿತಿಯನ್ನು ನಿಗದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (ಇಡಬ್ಲ್ಯೂಎಸ್)ನಿಗದಿಪಡಿಸಿರುವ ವಾರ್ಷಿಕ ₹ 8 ಲಕ್ಷ ಆದಾಯ ಮಿತಿಯನ್ನು ಪರಿಷ್ಕರಿಸಲು ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಕೇಂದ್ರ ಸರ್ಕಾರ ಮಂಗಳವಾರ ರಚಿಸಿದೆ.</p>.<p>ಹಣಕಾಸು ಸಚಿವಾಲಯದ ಮಾಜಿ ಕಾರ್ಯದರ್ಶಿ ಅಜಯಭೂಷಣ್ ಪಾಂಡೆ, ಭಾರತೀಯ ಸಮಾಜವಿಜ್ಞಾನ ಸಂಶೋಧನಾ ಪರಿಷತ್ತಿನ ಸದಸ್ಯ ಕಾರ್ಯದರ್ಶಿ ವಿ.ಕೆ.ಮಲ್ಹೋತ್ರ ಹಾಗೂ ಪ್ರಧಾನ ಆರ್ಥಿಕ ಸಲಹೆಗಾರ ಸಂಜಯ್ ಸನ್ಯಾಲ್ ಅವರು ಈ ಸಮಿತಿಯಲ್ಲಿ ಇದ್ದಾರೆ.</p>.<p>ಮೂರು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯ ಸಮಿತಿಗೆ ಸೂಚಿಸಿದೆ.</p>.<p>‘ಆರ್ಥಿಕವಾಗಿ ಹಿಂದುಳಿದ ವರ್ಗವನ್ನು ಗುರುತಿಸಲು ವಿವಿಧ ರಾಜ್ಯಗಳಲ್ಲಿ ಅನುಸರಿಸಲಾಗುತ್ತಿರುವ ವಿಧಾನಗಳನ್ನು ಈ ತ್ರಿಸದಸ್ಯ ಸಮಿತಿ ಪರಿಶೀಲನೆ ನಡೆಸುವುದು ಹಾಗೂ ಈ ಉದ್ದೇಶಕ್ಕಾಗಿ ಭವಿಷ್ಯದಲ್ಲಿ ಅಳವಡಿಸಿಕೊಳ್ಳಬೇಕಾದ ಮಾನದಂಡಗಳ ಕುರಿತು ಶಿಫಾರಸು ಮಾಡುವುದು’ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.</p>.<p>‘ಆದಾಯ ಮಿತಿ ಮಾನದಂಡ ಪರಿಷ್ಕರಿಸಲು ಸಮಿತಿ ರಚಿಸಲಾಗುವುದು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು,ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್, ವಿಕ್ರಂ ನಾಥ್ ಅವರಿದ್ದ ಪೀಠಕ್ಕೆ ನ. 25ರಂದು ತಿಳಿಸಿದ್ದರು.</p>.<p>ಅಖಿಲ ಭಾರತ ಕೋಟಾ ಸೀಟುಗಳಿಗೆ ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಮೀಸಲಾತಿ ಸಿಂಧುತ್ವ ಕುರಿತು ತೀರ್ಮಾನ ಕೈಗೊಳ್ಳುವವರೆಗೂನೀಟ್–ಪಿ.ಜಿ ಕೌನ್ಸೆಲಿಂಗ್ ಮುಂದೂಡಬೇಕು ಎಂದು ಸುಪ್ರೀಂಕೋರ್ಟ್ ಕಳೆದ ಅಕ್ಟೋಬರ್ 25ರಂದು ಕೇಂದ್ರಕ್ಕೆ ನಿರ್ದೇಶಿಸಿತ್ತು.</p>.<p>ಸಂವಿಧಾನದ 15ನೇ ವಿಧಿ ಅನ್ವಯ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ 10ರಷ್ಟು ಮೀಸಲಾತಿ ಘೋಷಿಸಿದ್ದ ಕೇಂದ್ರ ಸರ್ಕಾರ, ಈ ಸೌಲಭ್ಯ ಪಡೆಯಲು 2019ರ ಜನವರಿ 17ರಂದು ಆದಾಯ ಮಿತಿಯನ್ನು ನಿಗದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>