<p><strong>ದೆಹಲಿ:</strong> ಮಹಿಳೆಯರ ಸುರಕ್ಷತೆ ಮತ್ತು ಅವರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.</p>.<p>ಮಹಿಳೆಯರ ವಿರುದ್ಧದ ಅಪರಾಧಗಳ ಸಂದರ್ಭದಲ್ಲಿ ಪೊಲೀಸರು ನಿಯಮಗಳನ್ನು ಪಾಲಿಸಲು ವಿಫಲವಾದರೆ ಅದು ನ್ಯಾಯದಾನದಲ್ಲಿ ಉಂಟಾಗುವ ವೈಫಲ್ಯ ಎಂದು ಕೇಂದ್ರ ಹೇಳಿದೆ.</p>.<p>ಉತ್ತರಪ್ರದೇಶದ ಹಾಥರಸ್ನಲ್ಲಿ ಇತ್ತೀಚೆಗೆ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲೇ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಮೂರು ಪುಟಗಳ ವಿವರವಾದ ಸಲಹೆ ನೀಡಿದೆ. ಹೀಗಾಗಿ ಸಹಜವಾಗಿಯೇ ಈ ಬೆಳವಣಿಗೆ ಪ್ರಾಮುಖ್ಯತೆ ಪಡೆದುಕೊಂಡಿದೆ.</p>.<p>‘ಸಂಜ್ಞೆಯ ಅಪರಾಧ (Cognisable Offence) ಪ್ರಕರಣಗಳಲ್ಲಿ ಕಡ್ಡಾಯವಾಗಿ ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕು,’ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಮಹಿಳೆಯರ ಮೇಲೆ ನಡೆಯುವ ಸಂಜ್ಞೆಯ ಅಪರಾಧವೂ ಸೇರಿದಂತೆ ಯಾವುದೇ ದೌರ್ಜನ್ಯಗಳ ಪ್ರಕರಣದಲ್ಲಿ ಯಾವುದೇ ಪೊಲೀಸ್ ಠಾಣೆಗೆ ತನ್ನ ವ್ಯಾಪ್ತಿಯ ಪರಿಮಿತಿ ಇಲ್ಲದೇ ಎಫ್ಐಆರ್ ಅಥವಾ ಜೀರೊ ಎಫ್ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂಬುದನ್ನು ಕೇಂದ್ರ ಸರ್ಕಾರ ನೆನಪು ಮಾಡಿಕೊಟ್ಟಿದೆ.</p>.<p>‘ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಲ್ಲಿ ಕಟ್ಟುನಿಟ್ಟಾದ ನಿಬಂಧನೆಗಳಿದ್ದರೂ, ಅಗತ್ಯಗಳನ್ನು ಪಾಲಿಸುವಲ್ಲಿ ಪೊಲೀಸರು ವಿಫಲವಾಗುವುದು ನ್ಯಾಯದಾನ ವ್ಯವಸ್ಥೆಯಲ್ಲಿ ಆಗುವ ವೈಫಲ್ಯ. ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಇದು ಪೂರಕವಲ್ಲ,’ ಎಂದು ಗೃಹ ಇಲಾಖೆ ಹೇಳಿದೆ.</p>.<p>‘ಇಂಥ ವೈಫಲ್ಯಗಳು ಕಂಡುಬಂದರೆ, ಸೂಕ್ತ ತನಿಖೆ ನಡೆಸಿ, ಅದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಾಗಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ:</strong> ಮಹಿಳೆಯರ ಸುರಕ್ಷತೆ ಮತ್ತು ಅವರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.</p>.<p>ಮಹಿಳೆಯರ ವಿರುದ್ಧದ ಅಪರಾಧಗಳ ಸಂದರ್ಭದಲ್ಲಿ ಪೊಲೀಸರು ನಿಯಮಗಳನ್ನು ಪಾಲಿಸಲು ವಿಫಲವಾದರೆ ಅದು ನ್ಯಾಯದಾನದಲ್ಲಿ ಉಂಟಾಗುವ ವೈಫಲ್ಯ ಎಂದು ಕೇಂದ್ರ ಹೇಳಿದೆ.</p>.<p>ಉತ್ತರಪ್ರದೇಶದ ಹಾಥರಸ್ನಲ್ಲಿ ಇತ್ತೀಚೆಗೆ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲೇ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಮೂರು ಪುಟಗಳ ವಿವರವಾದ ಸಲಹೆ ನೀಡಿದೆ. ಹೀಗಾಗಿ ಸಹಜವಾಗಿಯೇ ಈ ಬೆಳವಣಿಗೆ ಪ್ರಾಮುಖ್ಯತೆ ಪಡೆದುಕೊಂಡಿದೆ.</p>.<p>‘ಸಂಜ್ಞೆಯ ಅಪರಾಧ (Cognisable Offence) ಪ್ರಕರಣಗಳಲ್ಲಿ ಕಡ್ಡಾಯವಾಗಿ ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕು,’ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಮಹಿಳೆಯರ ಮೇಲೆ ನಡೆಯುವ ಸಂಜ್ಞೆಯ ಅಪರಾಧವೂ ಸೇರಿದಂತೆ ಯಾವುದೇ ದೌರ್ಜನ್ಯಗಳ ಪ್ರಕರಣದಲ್ಲಿ ಯಾವುದೇ ಪೊಲೀಸ್ ಠಾಣೆಗೆ ತನ್ನ ವ್ಯಾಪ್ತಿಯ ಪರಿಮಿತಿ ಇಲ್ಲದೇ ಎಫ್ಐಆರ್ ಅಥವಾ ಜೀರೊ ಎಫ್ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂಬುದನ್ನು ಕೇಂದ್ರ ಸರ್ಕಾರ ನೆನಪು ಮಾಡಿಕೊಟ್ಟಿದೆ.</p>.<p>‘ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಲ್ಲಿ ಕಟ್ಟುನಿಟ್ಟಾದ ನಿಬಂಧನೆಗಳಿದ್ದರೂ, ಅಗತ್ಯಗಳನ್ನು ಪಾಲಿಸುವಲ್ಲಿ ಪೊಲೀಸರು ವಿಫಲವಾಗುವುದು ನ್ಯಾಯದಾನ ವ್ಯವಸ್ಥೆಯಲ್ಲಿ ಆಗುವ ವೈಫಲ್ಯ. ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಇದು ಪೂರಕವಲ್ಲ,’ ಎಂದು ಗೃಹ ಇಲಾಖೆ ಹೇಳಿದೆ.</p>.<p>‘ಇಂಥ ವೈಫಲ್ಯಗಳು ಕಂಡುಬಂದರೆ, ಸೂಕ್ತ ತನಿಖೆ ನಡೆಸಿ, ಅದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಾಗಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>