ನವದೆಹಲಿ: ‘ಉಕ್ರೇನ್ನಿಂದ ವಾಪಸಾಗಿರುವ 22,500ಕ್ಕೂ ಅಧಿಕ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣದ ಮುಂದುವರಿಕೆ ಕುರಿತ ವಿಷಯವನ್ನು ಸರ್ಕಾರ ಪರಿಶೀಲಿಸುತ್ತಿದೆ’ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದರು.
‘ಈ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಕುರಿತ ಅರ್ಜಿಗಳನ್ನು ಸರ್ಕಾರಪರಿಶೀಲಿಸುತ್ತಿದೆ. ಎರಡು ಅರ್ಜಿಗಳನ್ನು ಈಗಾಗಲೇ ಇತ್ಯರ್ಥಪಡಿಸಿದೆ’ ಎಂಬ ಸರ್ಕಾರದ ಹೇಳಿಕೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ದಾಖಲಿಸಿಕೊಂಡಿತು.
ಅರ್ಜಿದಾರರಾದ ವಕೀಲ ವಿಶಾಲ್ ತಿವಾರಿ ಅವರು, ವಾಪಸಾಗಿರುವ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಯಾವುದೇ ತೊಡಕಾಗದು ಎಂಬ ಖಾತರಿಯನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ಉಕ್ರೇನ್ನ ಒಡೆಸ್ಸಾದ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ವಿದ್ಯಾರ್ಥಿನಿ ಫಾತಿಮಾ ಅಹನಾ ಅವರು, ಈ ಕುರಿತು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.