<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಾಯಕರನ್ನು ಉಗ್ರರು ಹತ್ಯೆ ಮಾಡುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಲ್ಲ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<p>ಕಳೆದ ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಸುಮಾರು ಏಳು ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಗುರುವಾರ ಸರ್ಕಾರಿ ಶಾಲೆಗೆ ಗುಂಡು ಹಾರಿಸಿದ ವೇಳೆ ಮಹಿಳಾ ಪ್ರಾಂಶುಪಾಲರು ಮತ್ತು ಶಿಕ್ಷಕರು ಮೃತಪಟ್ಟಿದ್ದರು.</p>.<p>'ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳು ನೋವಿನ ಸಂಗತಿ ಮತ್ತು ಖಂಡನೀಯ. ಈ ಕಷ್ಟದ ಸಮಯದಲ್ಲಿ ನಾವು ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವಿದ್ದೇವೆ' ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಅಲ್ಲದೆ, 'ಕೇಂದ್ರ ಸರ್ಕಾರವು ಎಲ್ಲಾ ನಾಗರಿಕರ ಸುರಕ್ಷತೆಗಾಗಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಾಯಕರನ್ನು ಉಗ್ರರು ಹತ್ಯೆ ಮಾಡುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಲ್ಲ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<p>ಕಳೆದ ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಸುಮಾರು ಏಳು ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಗುರುವಾರ ಸರ್ಕಾರಿ ಶಾಲೆಗೆ ಗುಂಡು ಹಾರಿಸಿದ ವೇಳೆ ಮಹಿಳಾ ಪ್ರಾಂಶುಪಾಲರು ಮತ್ತು ಶಿಕ್ಷಕರು ಮೃತಪಟ್ಟಿದ್ದರು.</p>.<p>'ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳು ನೋವಿನ ಸಂಗತಿ ಮತ್ತು ಖಂಡನೀಯ. ಈ ಕಷ್ಟದ ಸಮಯದಲ್ಲಿ ನಾವು ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವಿದ್ದೇವೆ' ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಅಲ್ಲದೆ, 'ಕೇಂದ್ರ ಸರ್ಕಾರವು ಎಲ್ಲಾ ನಾಗರಿಕರ ಸುರಕ್ಷತೆಗಾಗಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>