ಪಿಎಂ–ಕಿಸಾನ್ ಸಮ್ಮಾನ್ ನಿಧಿ ಅಡಿ ಕೇಂದ್ರ ಕಳುಹಿಸಿದ್ದ 6 ಲಕ್ಷ ರೈತರ ಹೆಸರುಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿ, ಎರಡೂವರೆ ಲಕ್ಷ ರೈತರ ಹೆಸರನ್ನು ಆಯ್ಕೆ ಮಾಡಿ, ಆ ಪಟ್ಟಿಯನ್ನು ಪುನಃ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ, ಇಲ್ಲಿವರೆಗೂ ಆ ರೈತರಿಗೆ ಹಣ ನೀಡಿಲ್ಲ‘ ಎಂದು ಮುಖ್ಯಮಂತ್ರಿ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದ್ದರು.