ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಅರಣ್ಯದಲ್ಲಿ ಬೆಂಕಿ, ಎನ್‌ಡಿಆರ್‌ಎಫ್ ತಂಡ ರವಾನೆಗೆ ಆದೇಶ

Last Updated 4 ಏಪ್ರಿಲ್ 2021, 16:09 IST
ಅಕ್ಷರ ಗಾತ್ರ

ನವದೆಹಲಿ: ‘ಉತ್ತರಾಖಂಡದ ಅರಣ್ಯ ಪ್ರದೇಶದಲ್ಲಿನ ಬೆಂಕಿಯನ್ನು ನಂದಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಂಡಗಳು ಹಾಗೂ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರವು ಆದೇಶಿಸಿದೆ’ ಎಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

‘ನಾನು ಉತ್ತರಾಖಂಡದ ಮುಖ್ಯಮಂತ್ರಿ ಥೀರತ್ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದೆ. ಅರಣ್ಯ ಪ್ರದೇಶದಲ್ಲಿನ ಬೆಂಕಿ ನಂದಿಸಲು, ಆಸ್ತಿಪಾಸ್ತಿ ಸಂಕ್ಷಣೆಗೆ ಕೇಂದ್ರವು ತಕ್ಷಣವೇ ಎನ್‌ಡಿಆರ್‌ಎಫ್ ತಂಡಗಳು ಹಾಗೂ ಹೆಲಿಕಾಪ್ಟರ್‌ಗಳನ್ನು ಕಳುಹಿಸಲು ಆದೇಶ ಹೊರಡಿಸಿದೆ’ ಎಂದು ಅಮಿತ್ ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಲ್ಲಿ ಉತ್ತರಾಖಂಡದ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಜಿಲ್ಲೆಗಳಿಗೂ ಬೆಂಕಿ ವ್ಯಾಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT