ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಯೋಜನೆ | ಕರ್ನಾಟಕಕ್ಕೆ ₹1,345 ಕೋಟಿ ಮಂಜೂರು: ನಿತಿನ್ ಗಡ್ಕರಿ

Last Updated 23 ಮಾರ್ಚ್ 2023, 16:12 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗಾಗಿ ಕರ್ನಾಟಕಕ್ಕೆ ₹1,345 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಹೇಳಿದ್ದಾರೆ.

ಕಾರವಾರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ –52 ರಲ್ಲಿ 18 ಕಿ.ಮೀ.ಉದ್ದದ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಒಟ್ಟು ₹232.84 ಕೋಟಿ ಮಂಜೂರು ಮಾಡಲಾಗಿದೆ ಎಂದೂ ಸಚಿವರು ಟ್ವೀಟ್‌ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ವೆಂಕಟೇಶ್ವರ ಕ್ಯಾಂಪ್‌ನಿಂದ ದಡೇಸುಗೂರು ಕ್ಯಾಂಪ್‌ವರೆಗೆ 13.8 ಕಿ.ಮೀ. ಉದ್ದದ ರಸ್ತೆಯನ್ನು ವಿಸ್ತರಣೆ ಮಾಡಲು ₹142 ಕೋಟಿ ಹಾಗೂ ಇದೇ ಹೆದ್ದಾರಿಯ ಸಿಂದಿಗೇರಿ– ಬಳ್ಳಾರಿ ವಿಭಾಗದಲ್ಲಿ ರಸ್ತೆ ವಿಸ್ತರಣೆಗೆ ₹120 ಕೋಟಿ ಮಂಜೂರು ಮಾಡಲಾಗಿದೆ ಎಂದೂ ವಿವರಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ –69ರ ಹೊನ್ನಾವರ –ಚಿತ್ತೂರು ವಿಭಾಗದಲ್ಲಿ ಮೇಲ್ಸೇತುವೆ ನಿರ್ಮಿಸಲು ₹198 ಕೋಟಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಇದೇ ಹೆದ್ದಾರಿಯಲ್ಲಿ ರಸ್ತೆಯನ್ನು ದ್ವಿಪಥದಿಂದ ಚತುಷ್ಪಥಕ್ಕೆ ವಿಸ್ತರಿಸಲು ಹಾಗೂ ಇತರ ಕಾಮಗಾರಿಗಳಿಗೆ ₹653 ಕೋಟಿ ಮಂಜೂರು ಮಾಡಲಾಗಿದೆ ಎಂದೂ ಗಡ್ಕರಿಯವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT