ಒಂದೆಡೆ, ಆಗಿರುವ ಕಾಮಗಾರಿಗಳ ಸಂಬಂಧ ಗುತ್ತಿಗೆದಾರರಿಗೆ ಕೋಟ್ಯಂತರ ರೂಪಾಯಿ ಬಾಕಿ ಉಳಿದಿದ್ದು, ಕಾಮಗಾರಿಯನ್ನು ಜಾರಿಗೊಳಿಸುತ್ತಿರುವ ಇಲಾಖೆಗಳಿಗೆ ಈ ಕುರಿತಂತೆ ಅಸ್ಪಷ್ಟತೆ ಇದೆ. ಇನ್ನೊಂದೆಡೆ, ಕಾಮಗಾರಿಗಳ ಅನುಷ್ಠಾನ ವಿಳಂಬ ಹಾಗೂ ಬಾಕಿಯನ್ನು ಪಾವತಿಸಲಾಗದ ಕಾರಣ ರಾಜ್ಯ ಸರ್ಕಾರವು ಈ ಯೋಜನೆಗಳಿಗಾಗಿ ಹೊಸದಾಗಿ ವಿದೇಶಿ ಸಂಸ್ಥೆಗಳಿಂದ ಸಾಲವನ್ನು ಪಡೆಯಲಾಗದ ಸ್ಥಿತಿಯಲ್ಲಿದೆ.