ನೀತಿ ಆಯೋಗದ ಆರನೇ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ‘ಆತ್ಮನಿರ್ಭರ ಭಾರತ’ ಯೋಜನೆಯ ಭಾಗವಾಗಲು ಖಾಸಗಿ ವಲಯಕ್ಕೂ ಸಂಪೂರ್ಣ ಅವಕಾಶ ಸಿಗಬೇಕು. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜತೆಯಾಗಿ ಕೆಲಸ ಮಾಡಬೇಕು. ಸರ್ಕಾರ, ಆರ್ಥಿಕ ಪ್ರಗತಿಗಾಗಿ ಖಾಸಗಿ ವಲಯಕ್ಕೆ ಗೌರವ ಮತ್ತು ಸರಿಯಾದ ಪ್ರಾತಿನಿಧ್ಯ ನೀಡಬೇಕು ಎಂದರು.