ನವದೆಹಲಿ: ದೆಹಲಿಯಲ್ಲಿ ಜನರ ಮನೆ ಬಾಗಿಲಿಗೇ ಪಡಿತರ ತಲುಪಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರ ರೂಪಿಸಿದ್ದ ಯೋಜನೆಯನ್ನು ಕೇಂದ್ರ ಸರ್ಕಾರ ತಡೆ ಹಿಡಿದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
‘ಯೋಜನೆಯನ್ನು ಜಾರಿಗೊಳಿಸುವ ಮುನ್ನ, ಕೇಂದ್ರದಿಂದ ಅನುಮೋದನೆ ಪಡೆದಿಲ್ಲ ಎಂಬ ಕಾರಣ ನೀಡಿ ಇಂಥ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿವೆ.
ಮಹತ್ವಾಕಾಂಕ್ಷೆಯ ಈ ಯೋಜನೆಗೆ ಮುಂದಿನ ವಾರ ಚಾಲನೆ ನೀಡಲು ದೆಹಲಿ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು ಎಂದು ಇವೇ ಮೂಲಗಳು ತಿಳಿಸಿವೆ.