<p><strong>ನವದೆಹಲಿ: </strong>ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೋವಿಡ್–19 ಪ್ರಸರಣ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಪಿಡುಗಿನ ಪ್ರಸರಣ ತಡೆಯಲು ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿಗೆ ನೆರವು–ಮಾರ್ಗದರ್ಶನ ನೀಡುವ ಸಲುವಾಗಿತಜ್ಞರನ್ನು ಒಳಗೊಂಡ ತಂಡಗಳನ್ನು ಈ ರಾಜ್ಯಗಳಿಗೆ ಕಳುಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.</p>.<p>ದೇಶದ ಅನೇಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್–19 ಪ್ರಕರಣಗಳು, ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ ಅಧಿಕ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿವೆ ಎಂದು ಸಚಿವಾಲಯ ತಿಳಿಸಿದೆ.</p>.<p>‘ದೇಶದಲ್ಲಿ ಕಂಡುಬರುತ್ತಿರುವ ಕೋವಿಡ್ ಪ್ರಕರಣಗಳ ಪೈಕಿ ಶೇ 70ರಷ್ಟು ಪ್ರಕರಣಗಳು ಈ ಎರಡು ರಾಜ್ಯಗಳಿಂದಲೇ ವರದಿಯಾಗುತ್ತಿವೆ’ ಎಂದೂ ಹೇಳಿದೆ.</p>.<p>ನವದೆಹಲಿಯಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್ಸಿಡಿಸಿ) ಸಂಸ್ಥೆಯ ತಜ್ಞರಿರುವ ತಂಡವನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತಿದೆ.</p>.<p>ಕೇರಳಕ್ಕೆ ತೆರಳುವ ತಂಡದಲ್ಲಿ ನವದೆಹಲಿಯ ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜ್ನ ವೈದ್ಯರು, ಆರೋಗ್ಯ ಸಚಿವಾಲಯದ ಅಧಿಕಾರಿಗಳು ಇರಲಿದ್ದಾರೆ. ಇವರಿಗೆ ತಿರುವನಂತಪುರದಲ್ಲಿರುವ ಆರೋಗ್ಯ ಸಚಿವಾಲಯದ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ನೆರವಾಗುವರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೋವಿಡ್–19 ಪ್ರಸರಣ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಪಿಡುಗಿನ ಪ್ರಸರಣ ತಡೆಯಲು ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿಗೆ ನೆರವು–ಮಾರ್ಗದರ್ಶನ ನೀಡುವ ಸಲುವಾಗಿತಜ್ಞರನ್ನು ಒಳಗೊಂಡ ತಂಡಗಳನ್ನು ಈ ರಾಜ್ಯಗಳಿಗೆ ಕಳುಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.</p>.<p>ದೇಶದ ಅನೇಕ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್–19 ಪ್ರಕರಣಗಳು, ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ ಅಧಿಕ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿವೆ ಎಂದು ಸಚಿವಾಲಯ ತಿಳಿಸಿದೆ.</p>.<p>‘ದೇಶದಲ್ಲಿ ಕಂಡುಬರುತ್ತಿರುವ ಕೋವಿಡ್ ಪ್ರಕರಣಗಳ ಪೈಕಿ ಶೇ 70ರಷ್ಟು ಪ್ರಕರಣಗಳು ಈ ಎರಡು ರಾಜ್ಯಗಳಿಂದಲೇ ವರದಿಯಾಗುತ್ತಿವೆ’ ಎಂದೂ ಹೇಳಿದೆ.</p>.<p>ನವದೆಹಲಿಯಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್ಸಿಡಿಸಿ) ಸಂಸ್ಥೆಯ ತಜ್ಞರಿರುವ ತಂಡವನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುತ್ತಿದೆ.</p>.<p>ಕೇರಳಕ್ಕೆ ತೆರಳುವ ತಂಡದಲ್ಲಿ ನವದೆಹಲಿಯ ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜ್ನ ವೈದ್ಯರು, ಆರೋಗ್ಯ ಸಚಿವಾಲಯದ ಅಧಿಕಾರಿಗಳು ಇರಲಿದ್ದಾರೆ. ಇವರಿಗೆ ತಿರುವನಂತಪುರದಲ್ಲಿರುವ ಆರೋಗ್ಯ ಸಚಿವಾಲಯದ ಪ್ರಾದೇಶಿಕ ಕಚೇರಿಯ ಅಧಿಕಾರಿಗಳು ನೆರವಾಗುವರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>