<p class="title"><strong>ನವದೆಹಲಿ</strong>: ಪೌರತ್ವ ಕುರಿತು ಕೇಂದ್ರ ಸರ್ಕಾರದ ಹೊಸ ಕ್ರಮ ಸಿಎಎಯ ಹಿಂಬಾಗಿಲ ಪ್ರವೇಶವಾಗಿದೆ. ಇದು, ಸರ್ಕಾರದ ಪ್ರತಿಗಾಮಿ ಮನೋಭಾವವನ್ನು ಬಿಂಬಿಸಲಿದೆ ಎಂದು ಎಡಪಕ್ಷಗಳು ಟೀಕಿಸಿವೆ.</p>.<p class="bodytext">ದೇಶದ ಐದು ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದವರಿಂದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.</p>.<p class="bodytext">ಈ ಹೆಜ್ಜೆಯು ಸಿಎಎ–2019ರ ಹಿಂಬಾಗಿಲ ಪ್ರವೇಶವಾಗಿದೆ. ಅಲ್ಲದೆ, ಇದು ಕೇಂದ್ರ ಸರ್ಕಾರದ ಪ್ರತಿಗಾಮಿ ವ್ಯಕ್ತಿತ್ವವನ್ನು ಬಿಂಬಿಸಲಿದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಟೀಕಿಸಿದ್ದಾರೆ.</p>.<p class="bodytext">ಸಿಪಿಐ–ಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ‘ಸಿಎಎ ನಿಯಮಗಳು ಚಾಲ್ತಿಯಲ್ಲಿ ಇರುವಾಗಲೇ ಇಂತಹ ಅಧಿಸೂಚನೆ ಹೊರಡಿಸುವುದು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದರು.</p>.<p>ಕೇಂದ್ರ ಸರ್ಕಾರ ಈ ಬಗ್ಗೆ ಗೆಜೆಟ್ನಲ್ಲಿ ಪ್ರಕಟಣೆ ಹೊರಡಿಸಿದ್ದು, ಹಾಲಿ ನಿಯಮಗಳಿಗೆ ತಿದ್ದುಪಡಿ ತಂದು ಗುಜರಾತ್, ಛತ್ತೀಸಗಡ, ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳ 13 ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಈ ಸಮುದಾಯಗಳವರಿಂದ ಅರ್ಜಿ ಸ್ವೀಕರಿಸಿ, ಪರಿಶೀಲಿಸುವ ವಿಶೇಷಾಧಿಕಾರವನ್ನು ನೀಡಿದೆ.</p>.<p>ಸಿಎಎ–2019 ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಬೇಕಿದೆ. ಈ ತಿದ್ದುಪಡಿ ಕಾಯ್ದೆಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.</p>.<p>ಶುಕ್ರವಾರ ಹೊರಡಿಸಲಾದ ಅಧಿಸೂಚನೆಯಲ್ಲಿ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಪೌರತ್ವ ಕುರಿತು ಕೇಂದ್ರ ಸರ್ಕಾರದ ಹೊಸ ಕ್ರಮ ಸಿಎಎಯ ಹಿಂಬಾಗಿಲ ಪ್ರವೇಶವಾಗಿದೆ. ಇದು, ಸರ್ಕಾರದ ಪ್ರತಿಗಾಮಿ ಮನೋಭಾವವನ್ನು ಬಿಂಬಿಸಲಿದೆ ಎಂದು ಎಡಪಕ್ಷಗಳು ಟೀಕಿಸಿವೆ.</p>.<p class="bodytext">ದೇಶದ ಐದು ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದವರಿಂದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.</p>.<p class="bodytext">ಈ ಹೆಜ್ಜೆಯು ಸಿಎಎ–2019ರ ಹಿಂಬಾಗಿಲ ಪ್ರವೇಶವಾಗಿದೆ. ಅಲ್ಲದೆ, ಇದು ಕೇಂದ್ರ ಸರ್ಕಾರದ ಪ್ರತಿಗಾಮಿ ವ್ಯಕ್ತಿತ್ವವನ್ನು ಬಿಂಬಿಸಲಿದೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಟೀಕಿಸಿದ್ದಾರೆ.</p>.<p class="bodytext">ಸಿಪಿಐ–ಎಂಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು, ‘ಸಿಎಎ ನಿಯಮಗಳು ಚಾಲ್ತಿಯಲ್ಲಿ ಇರುವಾಗಲೇ ಇಂತಹ ಅಧಿಸೂಚನೆ ಹೊರಡಿಸುವುದು ಹೇಗೆ ಸಾಧ್ಯ?’ ಎಂದು ಪ್ರಶ್ನಿಸಿದರು.</p>.<p>ಕೇಂದ್ರ ಸರ್ಕಾರ ಈ ಬಗ್ಗೆ ಗೆಜೆಟ್ನಲ್ಲಿ ಪ್ರಕಟಣೆ ಹೊರಡಿಸಿದ್ದು, ಹಾಲಿ ನಿಯಮಗಳಿಗೆ ತಿದ್ದುಪಡಿ ತಂದು ಗುಜರಾತ್, ಛತ್ತೀಸಗಡ, ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳ 13 ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಈ ಸಮುದಾಯಗಳವರಿಂದ ಅರ್ಜಿ ಸ್ವೀಕರಿಸಿ, ಪರಿಶೀಲಿಸುವ ವಿಶೇಷಾಧಿಕಾರವನ್ನು ನೀಡಿದೆ.</p>.<p>ಸಿಎಎ–2019 ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಬೇಕಿದೆ. ಈ ತಿದ್ದುಪಡಿ ಕಾಯ್ದೆಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.</p>.<p>ಶುಕ್ರವಾರ ಹೊರಡಿಸಲಾದ ಅಧಿಸೂಚನೆಯಲ್ಲಿ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>