<p><strong>ನವದೆಹಲಿ:</strong> ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ 'ಚಕ್ಕಾ ಜಾಮ್' ನಡೆಸದಿರಲು ರಾಕೇಶ್ ಟಿಕಾಯತ್ಆತುರದನಿರ್ಧಾರವನ್ನು ತೆಗೆದುಕೊಂಡಿದ್ದರು. ಅವರು ತಮ್ಮ ಯೋಚನೆಯನ್ನು ಮೊದಲೇ ತಿಳಿಸಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಸಂಯಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಹಿರಿಯ ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.</p>.<p>ಕೇಂದ್ರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಕವಾಗಿ ಫೆಬ್ರವರಿ 6 ಶನಿವಾರದಂದು ದೇಶವ್ಯಾಪ್ತಿ ಚಕ್ಕಾ ಜಾಮ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಜೊತೆಗೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳನ್ನು ಹೊರತುಪಡಿಸಲಾಗಿತ್ತು.</p>.<p>ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಈ ಹಠಾತ್ ನಿರ್ಧಾರವು ರೈತ ಸಂಘಟನೆಯಲ್ಲಿ ಭಿನ್ನಭಿಪ್ರಾಯಗಳಿಗೆ ಕಾರಣವಾಗಿದೆ ಎಂದು ವರದಿಯಾಗಿತ್ತು. ಇದನ್ನು ಎಸ್ಕೆಎಂ ನಿರಾಕರಿಸಿದೆ.</p>.<p>ಮಾಧ್ಯಮಗಳಿಗೆ ಹೇಳುವ ಮೊದಲು ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಚಕ್ಕಾ ಜಾಮ್ ಬೇಡ ಎಂಬ ವಿಷಯವನ್ನು ರೈತರೊಂದಿಗೆ ಚರ್ಚಿಸಿದ್ದರೆ ಚೆನ್ನಾಗಿರುತ್ತಿತ್ತು. ನಂತರ ಅವರದನ್ನು ಎಸ್ಕೆಎಂ ಮುಖಂಡರೊಂದಿಗೆ ಚರ್ಚಿಸಿದ್ದರು ಎಂದು ದರ್ಶನ್ ಪಾಲ್ ತಿಳಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/rakesh-tikait-calls-on-farmers-for-tractor-revolution-803130.html" itemprop="url">'ಟ್ರ್ಯಾಕ್ಟರ್ ಕ್ರಾಂತಿ'ಗೆ ಕರೆ ನೀಡಿದ ರೈತ ಮುಖಂಡ ರಾಕೇಶ್ ಟಿಕಾಯತ್ </a></p>.<p>ರಾಕೇಶ್ ಟಿಕಾಯತ್ಆತುರದಲ್ಲಿನಿರ್ಧಾರವನ್ನು ಘೋಷಣೆ ಮಾಡಿದ್ದರು. ಕೊನೆಗೆ ಇದೊಂದು ಜಂಟಿ ನಿರ್ಧಾರವಾಗಿದ್ದು, ಎಸ್ಕೆಎಂ ಒಳಗೆ ಎಲ್ಲವೂ ಉತ್ತಮವಾಗಿದ್ದು, ನಾಯಕರ ನಡುವೆ ಭಿನ್ನಭಿಪ್ರಾಯಗಳಿವೆ ಎಂದು ಭಾವಿಸಬಾರದು ಎಂದು ತಿಳಿಸಿದರು.</p>.<p>ಇಲ್ಲಿ ಗಮನಾರ್ಹ ಅಂಶವೆಂದರೆ ಉತ್ತರ ಪ್ರದೇಶ, ಉತ್ತರಾಖಂಡದಲ್ಲೂ ಚಕ್ಕಾ ಜಾಮ್ ಸಂಪೂರ್ಣ ಯಶಸ್ಸನ್ನು ಕಂಡಿದೆ ಎಂಬ ಹೇಳಿಕೆಯನ್ನು ಎಸ್ಕೆಎಂ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ 'ಚಕ್ಕಾ ಜಾಮ್' ನಡೆಸದಿರಲು ರಾಕೇಶ್ ಟಿಕಾಯತ್ಆತುರದನಿರ್ಧಾರವನ್ನು ತೆಗೆದುಕೊಂಡಿದ್ದರು. ಅವರು ತಮ್ಮ ಯೋಚನೆಯನ್ನು ಮೊದಲೇ ತಿಳಿಸಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಸಂಯಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಹಿರಿಯ ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.</p>.<p>ಕೇಂದ್ರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಕವಾಗಿ ಫೆಬ್ರವರಿ 6 ಶನಿವಾರದಂದು ದೇಶವ್ಯಾಪ್ತಿ ಚಕ್ಕಾ ಜಾಮ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಜೊತೆಗೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳನ್ನು ಹೊರತುಪಡಿಸಲಾಗಿತ್ತು.</p>.<p>ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಈ ಹಠಾತ್ ನಿರ್ಧಾರವು ರೈತ ಸಂಘಟನೆಯಲ್ಲಿ ಭಿನ್ನಭಿಪ್ರಾಯಗಳಿಗೆ ಕಾರಣವಾಗಿದೆ ಎಂದು ವರದಿಯಾಗಿತ್ತು. ಇದನ್ನು ಎಸ್ಕೆಎಂ ನಿರಾಕರಿಸಿದೆ.</p>.<p>ಮಾಧ್ಯಮಗಳಿಗೆ ಹೇಳುವ ಮೊದಲು ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಚಕ್ಕಾ ಜಾಮ್ ಬೇಡ ಎಂಬ ವಿಷಯವನ್ನು ರೈತರೊಂದಿಗೆ ಚರ್ಚಿಸಿದ್ದರೆ ಚೆನ್ನಾಗಿರುತ್ತಿತ್ತು. ನಂತರ ಅವರದನ್ನು ಎಸ್ಕೆಎಂ ಮುಖಂಡರೊಂದಿಗೆ ಚರ್ಚಿಸಿದ್ದರು ಎಂದು ದರ್ಶನ್ ಪಾಲ್ ತಿಳಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/rakesh-tikait-calls-on-farmers-for-tractor-revolution-803130.html" itemprop="url">'ಟ್ರ್ಯಾಕ್ಟರ್ ಕ್ರಾಂತಿ'ಗೆ ಕರೆ ನೀಡಿದ ರೈತ ಮುಖಂಡ ರಾಕೇಶ್ ಟಿಕಾಯತ್ </a></p>.<p>ರಾಕೇಶ್ ಟಿಕಾಯತ್ಆತುರದಲ್ಲಿನಿರ್ಧಾರವನ್ನು ಘೋಷಣೆ ಮಾಡಿದ್ದರು. ಕೊನೆಗೆ ಇದೊಂದು ಜಂಟಿ ನಿರ್ಧಾರವಾಗಿದ್ದು, ಎಸ್ಕೆಎಂ ಒಳಗೆ ಎಲ್ಲವೂ ಉತ್ತಮವಾಗಿದ್ದು, ನಾಯಕರ ನಡುವೆ ಭಿನ್ನಭಿಪ್ರಾಯಗಳಿವೆ ಎಂದು ಭಾವಿಸಬಾರದು ಎಂದು ತಿಳಿಸಿದರು.</p>.<p>ಇಲ್ಲಿ ಗಮನಾರ್ಹ ಅಂಶವೆಂದರೆ ಉತ್ತರ ಪ್ರದೇಶ, ಉತ್ತರಾಖಂಡದಲ್ಲೂ ಚಕ್ಕಾ ಜಾಮ್ ಸಂಪೂರ್ಣ ಯಶಸ್ಸನ್ನು ಕಂಡಿದೆ ಎಂಬ ಹೇಳಿಕೆಯನ್ನು ಎಸ್ಕೆಎಂ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>