ಕಳೆದ ವರ್ಷ ಭಾರಿ ವಿರೋಧಕ್ಕೆ ಕಾರಣವಾಗಿ, ಜಗತ್ತಿನ ಗಮನವನ್ನು ಸೆಳೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್ಸಿ, ಸಿಎಎ ಎಲ್ಲವೂ ಒಂದಲ್ಲ ಒಂದು ರೀತಿಯಲ್ಲಿ ಅಸ್ಸಾಂ ರಾಜ್ಯದೊಂದಿಗೆ ತಳಕು ಹಾಕಿಕೊಂಡಿವೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಆರಂಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದೇ ಅಸ್ಸಾಂನಲ್ಲಿ. ಆದರೆ ಆ ನಂತರ ಅಲ್ಲಿ ಅದು ತಣ್ಣಗಾಗಿ ದೆಹಲಿಯಲ್ಲಿ ತೀವ್ರಗೊಂಡಿತು. ಇಲ್ಲಿ ಅಧಿಕಾರ ಉಳಿಸಿಕೊಳ್ಳಬಲ್ಲೆ ಎಂಬ ವಿಶ್ವಾಸ ಬಿಜೆಪಿಗೆ ಇದ್ದರೂ, ಜನರು ಎಂಥ ಪ್ರತಿಕ್ರಿಯೆ ನೀಡುತ್ತಾರೆ ಎಂಬುದರ ಸ್ಪಷ್ಟ ಚಿತ್ರಣ ಚುನಾವಣೆ ಸಮೀಪಿಸುವ ವೇಳೆಗೆ ಲಭಿಸಬಹುದು.