<p>ಅಸ್ಸಾಂನಲ್ಲಿ ಬಿಜೆಪಿ ಈ ಬಾರಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದೆ. ಈಚಿನ ವರ್ಷಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿರುವ ಬಿಜೆಪಿಗೆ ಅಸ್ಸಾಂ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದೆ. ಆದರೆ, ಹಾಕಿಕೊಂಡಿರುವ ಗುರಿಯನ್ನು ತಲುಪಲು ಬಿಜೆಪಿ ಸಫಲವಾಗುತ್ತದೆಯೇ ಅಥವಾ ಈ ಹಿಂದಿಗಿಂತಲೂ (60) ಕಡಿಮೆ ಸ್ಥಾನಗಳನ್ನು ಗೆಲ್ಲುತ್ತದೆಯೇ ಎಂಬ ಕುತೂಹಲ ಮೂಡಿದೆ.</p>.<p>ಕಳೆದ ವರ್ಷ ಭಾರಿ ವಿರೋಧಕ್ಕೆ ಕಾರಣವಾಗಿ, ಜಗತ್ತಿನ ಗಮನವನ್ನು ಸೆಳೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್ಸಿ, ಸಿಎಎ ಎಲ್ಲವೂ ಒಂದಲ್ಲ ಒಂದು ರೀತಿಯಲ್ಲಿ ಅಸ್ಸಾಂ ರಾಜ್ಯದೊಂದಿಗೆ ತಳಕು ಹಾಕಿಕೊಂಡಿವೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಆರಂಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದೇ ಅಸ್ಸಾಂನಲ್ಲಿ. ಆದರೆ ಆ ನಂತರ ಅಲ್ಲಿ ಅದು ತಣ್ಣಗಾಗಿ ದೆಹಲಿಯಲ್ಲಿ ತೀವ್ರಗೊಂಡಿತು. ಇಲ್ಲಿ ಅಧಿಕಾರ ಉಳಿಸಿಕೊಳ್ಳಬಲ್ಲೆ ಎಂಬ ವಿಶ್ವಾಸ ಬಿಜೆಪಿಗೆ ಇದ್ದರೂ, ಜನರು ಎಂಥ ಪ್ರತಿಕ್ರಿಯೆ ನೀಡುತ್ತಾರೆ ಎಂಬುದರ ಸ್ಪಷ್ಟ ಚಿತ್ರಣ ಚುನಾವಣೆ ಸಮೀಪಿಸುವ ವೇಳೆಗೆ ಲಭಿಸಬಹುದು.</p>.<p>ಇನ್ನೊಂದೆಡೆ ಕಾಂಗ್ರೆಸ್ ಮುಂಚಿತವಾಗಿಯೇ ಎಚ್ಚೆತ್ತುಕೊಂಡು, ಎಡಪಕ್ಷಗಳು ಹಾಗೂ ರಾಜ್ಯಸಭಾ ಸದಸ್ಯ ಅಜಿತ್ ಕುಮಾರ್ ಭುಯಾನ್ ನೇತೃತ್ವದಲ್ಲಿ ಇತ್ತೀಚೆಗೆ ರಚನೆಯಾಗಿರುವ ಅಂಚಲಿಕ್ ಗಣ ಮೋರ್ಚಾದ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಕೂಟವೂ ಸಹ, ‘ನಾವು 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಸ್ಸಾಂನಲ್ಲಿ ಬಿಜೆಪಿ ಈ ಬಾರಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದೆ. ಈಚಿನ ವರ್ಷಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿರುವ ಬಿಜೆಪಿಗೆ ಅಸ್ಸಾಂ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದೆ. ಆದರೆ, ಹಾಕಿಕೊಂಡಿರುವ ಗುರಿಯನ್ನು ತಲುಪಲು ಬಿಜೆಪಿ ಸಫಲವಾಗುತ್ತದೆಯೇ ಅಥವಾ ಈ ಹಿಂದಿಗಿಂತಲೂ (60) ಕಡಿಮೆ ಸ್ಥಾನಗಳನ್ನು ಗೆಲ್ಲುತ್ತದೆಯೇ ಎಂಬ ಕುತೂಹಲ ಮೂಡಿದೆ.</p>.<p>ಕಳೆದ ವರ್ಷ ಭಾರಿ ವಿರೋಧಕ್ಕೆ ಕಾರಣವಾಗಿ, ಜಗತ್ತಿನ ಗಮನವನ್ನು ಸೆಳೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್ಸಿ, ಸಿಎಎ ಎಲ್ಲವೂ ಒಂದಲ್ಲ ಒಂದು ರೀತಿಯಲ್ಲಿ ಅಸ್ಸಾಂ ರಾಜ್ಯದೊಂದಿಗೆ ತಳಕು ಹಾಕಿಕೊಂಡಿವೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಆರಂಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದೇ ಅಸ್ಸಾಂನಲ್ಲಿ. ಆದರೆ ಆ ನಂತರ ಅಲ್ಲಿ ಅದು ತಣ್ಣಗಾಗಿ ದೆಹಲಿಯಲ್ಲಿ ತೀವ್ರಗೊಂಡಿತು. ಇಲ್ಲಿ ಅಧಿಕಾರ ಉಳಿಸಿಕೊಳ್ಳಬಲ್ಲೆ ಎಂಬ ವಿಶ್ವಾಸ ಬಿಜೆಪಿಗೆ ಇದ್ದರೂ, ಜನರು ಎಂಥ ಪ್ರತಿಕ್ರಿಯೆ ನೀಡುತ್ತಾರೆ ಎಂಬುದರ ಸ್ಪಷ್ಟ ಚಿತ್ರಣ ಚುನಾವಣೆ ಸಮೀಪಿಸುವ ವೇಳೆಗೆ ಲಭಿಸಬಹುದು.</p>.<p>ಇನ್ನೊಂದೆಡೆ ಕಾಂಗ್ರೆಸ್ ಮುಂಚಿತವಾಗಿಯೇ ಎಚ್ಚೆತ್ತುಕೊಂಡು, ಎಡಪಕ್ಷಗಳು ಹಾಗೂ ರಾಜ್ಯಸಭಾ ಸದಸ್ಯ ಅಜಿತ್ ಕುಮಾರ್ ಭುಯಾನ್ ನೇತೃತ್ವದಲ್ಲಿ ಇತ್ತೀಚೆಗೆ ರಚನೆಯಾಗಿರುವ ಅಂಚಲಿಕ್ ಗಣ ಮೋರ್ಚಾದ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿಕೂಟವೂ ಸಹ, ‘ನಾವು 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>