<p><strong>ಚಂಡೀಗಡ:</strong> 98 ವರ್ಷದ ವೃದ್ಧೆಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು (31) ಬಂಧಿಸುವಮೂಲಕ ಪ್ರಕರಣದ ರಹಸ್ಯವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಚಂಡೀಗಡ ಪೊಲೀಸರು ತಿಳಿಸಿದ್ದಾರೆ.</p>.<p>ಪೊಲೀಸರು ನೀಡಿರುವಮಾಹಿತಿ ಪ್ರಕಾರ, ಕೋವಿಡ್ ನಿಯಂತ್ರಣದ ಸಲುವಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ವೇಳೆ ಕೆಲಸ ಕಳೆದುಕೊಂಡಿದ್ದ ಬಂಧಿತ, ವೃದ್ಧೆಯ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಲು ಆಗಸ್ಟ್6 ತೆರಳಿದ್ದ. ಈ ವೇಳೆ ಎಚ್ಚೆತ್ತುಕೊಂಡು ಗಲಾಟೆ ಮಾಡಿದ್ದ ವೃದ್ಧೆಯನ್ನು ಹತ್ತೆ ಮಾಡಿದ್ದ ಎನ್ನಲಾಗಿದೆ.</p>.<p>ವೃದ್ಧ ಮಹಿಳೆಯನ್ನು ಜೋಗಿಂದರ್ ಕೌರ್ ಎನ್ನಲಾಗಿದ್ದು, ಒಂಟಿಯಾಗಿ ವಾಸಿಸುತ್ತಿದ್ದರು. ದರೋಡೆ ಯತ್ನದ ವೇಳೆ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಲಾಗಿತ್ತು. ಆದಾಗ್ಯೂ ಮನೆಯಲ್ಲಿ ಬೆಲೆಬಾಳುವ ಯಾವುದೇ ವಸ್ತುಗಳು ಕಾಣೆಯಾಗಿರಲಿಲ್ಲ.ಕೆಲಸದವರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.</p>.<p>ಈ ಸಂಬಂಧ ಇಲ್ಲಿನ ಸೆಕ್ಟರ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.</p>.<p>ಬಂಧಿತನನ್ನು ಕೈಲಾಶ್ ಭಟ್ ಎಂದು ಗುರುತಿಸಲಾಗಿದೆ.ಉತ್ತರಾಖಂಡ್ನ ಅಲ್ಮೋರಾದಿಂದ ಬಂದಿದ್ದ ಈತ ಸೆಕ್ಟರ್-15ರ ಮನೆಯೊಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ. ಹತ್ಯೆಗೆ ಬಳಸಲಾಗಿದ್ದ ಚಾಕುವನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಾಕ್ಡೌನ್ ವೇಳೆ ಕೆಲಸ ಕಳೆದುಕೊಂಡಿದ್ದ ಬಂಧಿತನಿಗೆ, ಬಹುದಿನಗಳವರೆಗೆ ಯಾವುದೇ ಕೆಲಸವಿರಲಿಲ್ಲ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕುಲದೀಪ್ ಸಿಂಗ್ ಚಹಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> 98 ವರ್ಷದ ವೃದ್ಧೆಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು (31) ಬಂಧಿಸುವಮೂಲಕ ಪ್ರಕರಣದ ರಹಸ್ಯವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಚಂಡೀಗಡ ಪೊಲೀಸರು ತಿಳಿಸಿದ್ದಾರೆ.</p>.<p>ಪೊಲೀಸರು ನೀಡಿರುವಮಾಹಿತಿ ಪ್ರಕಾರ, ಕೋವಿಡ್ ನಿಯಂತ್ರಣದ ಸಲುವಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ವೇಳೆ ಕೆಲಸ ಕಳೆದುಕೊಂಡಿದ್ದ ಬಂಧಿತ, ವೃದ್ಧೆಯ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಲು ಆಗಸ್ಟ್6 ತೆರಳಿದ್ದ. ಈ ವೇಳೆ ಎಚ್ಚೆತ್ತುಕೊಂಡು ಗಲಾಟೆ ಮಾಡಿದ್ದ ವೃದ್ಧೆಯನ್ನು ಹತ್ತೆ ಮಾಡಿದ್ದ ಎನ್ನಲಾಗಿದೆ.</p>.<p>ವೃದ್ಧ ಮಹಿಳೆಯನ್ನು ಜೋಗಿಂದರ್ ಕೌರ್ ಎನ್ನಲಾಗಿದ್ದು, ಒಂಟಿಯಾಗಿ ವಾಸಿಸುತ್ತಿದ್ದರು. ದರೋಡೆ ಯತ್ನದ ವೇಳೆ ಆಕೆಯ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಲಾಗಿತ್ತು. ಆದಾಗ್ಯೂ ಮನೆಯಲ್ಲಿ ಬೆಲೆಬಾಳುವ ಯಾವುದೇ ವಸ್ತುಗಳು ಕಾಣೆಯಾಗಿರಲಿಲ್ಲ.ಕೆಲಸದವರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.</p>.<p>ಈ ಸಂಬಂಧ ಇಲ್ಲಿನ ಸೆಕ್ಟರ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.</p>.<p>ಬಂಧಿತನನ್ನು ಕೈಲಾಶ್ ಭಟ್ ಎಂದು ಗುರುತಿಸಲಾಗಿದೆ.ಉತ್ತರಾಖಂಡ್ನ ಅಲ್ಮೋರಾದಿಂದ ಬಂದಿದ್ದ ಈತ ಸೆಕ್ಟರ್-15ರ ಮನೆಯೊಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ. ಹತ್ಯೆಗೆ ಬಳಸಲಾಗಿದ್ದ ಚಾಕುವನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಾಕ್ಡೌನ್ ವೇಳೆ ಕೆಲಸ ಕಳೆದುಕೊಂಡಿದ್ದ ಬಂಧಿತನಿಗೆ, ಬಹುದಿನಗಳವರೆಗೆ ಯಾವುದೇ ಕೆಲಸವಿರಲಿಲ್ಲ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕುಲದೀಪ್ ಸಿಂಗ್ ಚಹಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>