<p><strong>ನವದೆಹಲಿ</strong>: ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸುವ ‘ಚಂದ್ರಯಾನ–3’ ಗಗನಯಾನವು 2022ರ ಮೂರನೇ ತ್ರೈಮಾಸಿಕದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.</p>.<p>ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್ ಅವರು, ಕೋವಿಡ್–19 ಕಾರಣಕ್ಕೆ ಯೋಜನೆಯ ಪ್ರಗತಿ ಕುಂಠಿತಗೊಂಡಿದೆ. ಹೀಗಾಗಿ, ಚಂದ್ರಯಾನ–3 ಯೋಜನೆಯ ಉಡಾವಣೆಯ ದಿನಾಂಕವನ್ನು ಮರುನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಚಂದ್ರಯಾನ–3 ಯೋಜನೆಯು ಹಲವು ಪ್ರಕ್ರಿಯೆಗಳನ್ನು ಒಳಗೊಂಡಿದೆ. ಹಲವಾರು ರೀತಿಯ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ. ಲಾಕ್ಡೌನ್ ಅವಧಿಯಲ್ಲೂ ಮನೆಯಿಂದಲೇ ಕೆಲಸ ಮಾಡಿದ ವಿಜ್ಞಾನಿಗಳು ಹಲವಾರು ಕಾರ್ಯಗಳನ್ನು ಪೂರೈಸಿದ್ದಾರೆ. ಲಾಕ್ಡೌನ್ ಸಡಿಲಿಕೆಯಾದ ಬಳಿಕ ಯೋಜನೆಯ ಕಾರ್ಯವು ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸುವ ಉದ್ದೇಶ ಹೊಂದಿದ್ದ ‘ಚಂದ್ರಯಾನ–2’ ಅನ್ನು 2019ರ ಜುಲೈ 22ರಂದು ಉಡಾವಣೆ ಮಾಡಲಾಗಿತ್ತು. ಆದರೆ, ಲ್ಯಾಂಡರ್ ಇಳಿಸುವಲ್ಲಿ ಕೊನೆ ಗಳಿಗೆಯಲ್ಲಿ ಇಸ್ರೊ ವಿಫಲವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸುವ ‘ಚಂದ್ರಯಾನ–3’ ಗಗನಯಾನವು 2022ರ ಮೂರನೇ ತ್ರೈಮಾಸಿಕದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.</p>.<p>ಲೋಕಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಜಿತೇಂದ್ರ ಸಿಂಗ್ ಅವರು, ಕೋವಿಡ್–19 ಕಾರಣಕ್ಕೆ ಯೋಜನೆಯ ಪ್ರಗತಿ ಕುಂಠಿತಗೊಂಡಿದೆ. ಹೀಗಾಗಿ, ಚಂದ್ರಯಾನ–3 ಯೋಜನೆಯ ಉಡಾವಣೆಯ ದಿನಾಂಕವನ್ನು ಮರುನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಚಂದ್ರಯಾನ–3 ಯೋಜನೆಯು ಹಲವು ಪ್ರಕ್ರಿಯೆಗಳನ್ನು ಒಳಗೊಂಡಿದೆ. ಹಲವಾರು ರೀತಿಯ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ. ಲಾಕ್ಡೌನ್ ಅವಧಿಯಲ್ಲೂ ಮನೆಯಿಂದಲೇ ಕೆಲಸ ಮಾಡಿದ ವಿಜ್ಞಾನಿಗಳು ಹಲವಾರು ಕಾರ್ಯಗಳನ್ನು ಪೂರೈಸಿದ್ದಾರೆ. ಲಾಕ್ಡೌನ್ ಸಡಿಲಿಕೆಯಾದ ಬಳಿಕ ಯೋಜನೆಯ ಕಾರ್ಯವು ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸುವ ಉದ್ದೇಶ ಹೊಂದಿದ್ದ ‘ಚಂದ್ರಯಾನ–2’ ಅನ್ನು 2019ರ ಜುಲೈ 22ರಂದು ಉಡಾವಣೆ ಮಾಡಲಾಗಿತ್ತು. ಆದರೆ, ಲ್ಯಾಂಡರ್ ಇಳಿಸುವಲ್ಲಿ ಕೊನೆ ಗಳಿಗೆಯಲ್ಲಿ ಇಸ್ರೊ ವಿಫಲವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>