ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಶಾಸಕರು ಘೋಷಣೆ ಕೂಗಿದ ನಂತರ ವಿಧಾನಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಆ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ರಾಮ್ ಪ್ರಸಾದ್ ಗೋಯಲ್ ಅವರು, ಬಿಜೆಪಿ ಶಾಸಕರಿಗೆ ಕುಳಿತುಕೊಳ್ಳಲು ಸೂಚಿಸಿದರು. ಸ್ಪೀಕರ್ ಮನವಿಗೆ ಸೊಪ್ಪು ಹಾಕದ ಬಿಜೆಪಿ ಶಾಸಕರು ಬೆಂಚ್ಗಳ ಮೇಲೆ ನಿಂತು ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಲು ಮುಂದಾದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್, ಒಂದು ದಿನದ ಮಟ್ಟಿಗೆ ಮೂವರು ಶಾಸಕರನ್ನು ಅಮಾನತುಗೊಳಿಸಿ ಹೊರನಡೆಯುವಂತೆ ಸೂಚಿಸಿದರು.