<p><strong>ಚಂಡೀಗಡ:</strong> ಅಡ್ವೊಕೇಟ್ ಜನರಲ್ ಅವರನ್ನು ಪದಚ್ಯುತಗೊಳಿಸಿದ್ದಕ್ಕಾಗಿ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ಬುಧವಾರ ತಮ್ಮದೇ ಪಕ್ಷದ ನಾಯಕರಿಂದ ತೀವ್ರ ವಾಗ್ದಾಳಿ ಎದುರಿಸಬೇಕಾಯಿತು.</p>.<p>ಕಾಂಗ್ರೆಸ್ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸುನೀಲ್ ಜಾಖರ್ ಅವರು, ಚನ್ನಿ ಅವರನ್ನು ‘ನಿಜವಾಗಿಯೂ ರಾಜಿ ಮಾಡಿಕೊಂಡ ಸಿಎಂ’ ಎಂದು ಟೀಕಿಸಿದರು.</p>.<p>ಆನಂದ್ಪುರ ಸಾಹಿಬ್ನ ಸಂಸದರಾದ ಹಿರಿಯ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಅವರು, ಈ ವಿಷಯದ ಬಗ್ಗೆ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಎ.ಜಿ ಕಚೇರಿಯನ್ನು ರಾಜಕೀಯಗೊಳಿಸುವುದು ಸಾಂವಿಧಾನಿಕ ಹುದ್ದೆಗಳ ಸಮಗ್ರತೆಯನ್ನು ಹಾಳುಮಾಡಿದಂತಾಗುತ್ತದೆ ಎಂದು ಟೀಕಿಸಿದರು.</p>.<p>ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ರಾಜ್ಯದ ಎ.ಜಿಯನ್ನು ಬದಲಿಸುವಂತೆ ಮಾಡಿದ ಒತ್ತಡಕ್ಕೆ ಮಣಿದು ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್ ಅವರ ರಾಜೀನಾಮೆಯನ್ನು ಚನ್ನಿ ಸರ್ಕಾರ ಮಂಗಳವಾರ ಅಂಗೀಕರಿಸಿದ ನಂತರ ಈ ಹೇಳಿಕೆಗಳು ಬಂದಿವೆ.</p>.<p>ಹೊಸ ಅಡ್ವೊಕೇಟ್ ಜನರಲ್ ನೇಮಕ ಮಾಡಲಾಗುವುದು ಎಂದು ಚನ್ನಿ ಹೇಳಿದ್ದರು.</p>.<p>ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಜಾಖರ್ ಅವರು, ‘ಸಮರ್ಥ ಆದರೆ ‘ಆಪಾದಿತ’ ಅಧಿಕಾರಿಯ ಉಚ್ಚಾಟನೆಯು ‘ನಿಜವಾಗಿ’ ರಾಜಿ ಮಾಡಿಕೊಂಡ ಸಿಎಂ ಅನ್ನು ಅನಾವರಣಗೊಳಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಅಡ್ವೊಕೇಟ್ ಜನರಲ್ ಅವರನ್ನು ಪದಚ್ಯುತಗೊಳಿಸಿದ್ದಕ್ಕಾಗಿ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ಬುಧವಾರ ತಮ್ಮದೇ ಪಕ್ಷದ ನಾಯಕರಿಂದ ತೀವ್ರ ವಾಗ್ದಾಳಿ ಎದುರಿಸಬೇಕಾಯಿತು.</p>.<p>ಕಾಂಗ್ರೆಸ್ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸುನೀಲ್ ಜಾಖರ್ ಅವರು, ಚನ್ನಿ ಅವರನ್ನು ‘ನಿಜವಾಗಿಯೂ ರಾಜಿ ಮಾಡಿಕೊಂಡ ಸಿಎಂ’ ಎಂದು ಟೀಕಿಸಿದರು.</p>.<p>ಆನಂದ್ಪುರ ಸಾಹಿಬ್ನ ಸಂಸದರಾದ ಹಿರಿಯ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಅವರು, ಈ ವಿಷಯದ ಬಗ್ಗೆ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಎ.ಜಿ ಕಚೇರಿಯನ್ನು ರಾಜಕೀಯಗೊಳಿಸುವುದು ಸಾಂವಿಧಾನಿಕ ಹುದ್ದೆಗಳ ಸಮಗ್ರತೆಯನ್ನು ಹಾಳುಮಾಡಿದಂತಾಗುತ್ತದೆ ಎಂದು ಟೀಕಿಸಿದರು.</p>.<p>ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ರಾಜ್ಯದ ಎ.ಜಿಯನ್ನು ಬದಲಿಸುವಂತೆ ಮಾಡಿದ ಒತ್ತಡಕ್ಕೆ ಮಣಿದು ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್ ಅವರ ರಾಜೀನಾಮೆಯನ್ನು ಚನ್ನಿ ಸರ್ಕಾರ ಮಂಗಳವಾರ ಅಂಗೀಕರಿಸಿದ ನಂತರ ಈ ಹೇಳಿಕೆಗಳು ಬಂದಿವೆ.</p>.<p>ಹೊಸ ಅಡ್ವೊಕೇಟ್ ಜನರಲ್ ನೇಮಕ ಮಾಡಲಾಗುವುದು ಎಂದು ಚನ್ನಿ ಹೇಳಿದ್ದರು.</p>.<p>ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಜಾಖರ್ ಅವರು, ‘ಸಮರ್ಥ ಆದರೆ ‘ಆಪಾದಿತ’ ಅಧಿಕಾರಿಯ ಉಚ್ಚಾಟನೆಯು ‘ನಿಜವಾಗಿ’ ರಾಜಿ ಮಾಡಿಕೊಂಡ ಸಿಎಂ ಅನ್ನು ಅನಾವರಣಗೊಳಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>