ನವದೆಹಲಿ (ಪಿಟಿಐ):‘ಪ್ರಾಜೆಕ್ಟ್ ಚೀತಾ’ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳಲ್ಲಿ ಒಂದು ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಬುಧವಾರ ತಿಳಿಸಿದ್ದಾರೆ.
‘ಅಮೃತ ಕಾಲ’ದಲ್ಲಿ ಭಾರತದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲೇ ಇದೊಂದು ಮಹತ್ವದ ಘಟನೆ ಎಂದು ಯಾದವ್ ಬಣ್ಣಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಆಫ್ರಿಕಾ ಚಿರತೆಗಳಲ್ಲಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿರುವ ಮಾಹಿತಿ ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದೆ. 8 ಚೀತಾಗಳಲ್ಲಿ ಇತ್ತೀಚೆಗೆ ಸಾಶಾ ಎಂಬ ಚೀತಾ ಅನಾರೋಗ್ಯದಿಂದ ಮೃತಪಟ್ಟಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.