<p><strong>ಚೆನ್ನೈ (ಪಿಟಿಐ): </strong>ತಮಿಳುನಾಡಿನಲ್ಲಿ ಸೋಮವಾರವೂ ಮಳೆ ಮುಂದುವರಿದಿದೆ. ರಾಜಧಾನಿ ಚೆನ್ನೈ ವಲಯ ಹಾಗೂ ರಾಜ್ಯದ ಉತ್ತರ ಭಾಗದ ಜಿಲ್ಲೆಗಳಾದ ಚೆಂಗಲ್ಪೇಟ್, ಕಾಂಚಿಪುರಂ, ತಿರುವಳ್ಳೂರು ಮತ್ತು ವೆಲ್ಲೂರಿನಲ್ಲಿ ಮುಂಜಾನೆಯಿಂದ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.</p>.<p>ಈ ವರ್ಷ ಮುಗಿಯುವುದಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ ಚೆನ್ನೈನಲ್ಲಿ ವರ್ಷದ ಸರಾಸರಿ 140 ಸೆ.ಮೀ ಮಳೆ ಆಗಿದೆ. ನವೆಂಬರ್ 6ರಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರ ಸ್ತಬ್ಧವಾಗಿದೆ. ಮೊದಲ 8 ದಿನಗಳಲ್ಲೇ ತಿಂಗಳ ಸರಾಸರಿ ಮಳೆ ಕೂಡ ಆಗಿದೆ. ಚೆನ್ನೈನ ನವೆಂಬರ್ ತಿಂಗಳ ಸರಾಸರಿ ಮಳೆ 37.4 ಸೆ.ಮೀ ಆಗಿದ್ದು, ನ.1ರಿಂದ 8ರವರೆಗೆ 41.5 ಸೆ.ಮೀ ,ಳೆಯಾಗಿದೆ.</p>.<p>ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, 24 ಗಂಟೆಗಳಲ್ಲಿ ಚೆನ್ನೈ ಉಪನಗರ ವ್ಯಾಪ್ತಿಯಲ್ಲಿ 14 ಸೆಂ.ಮೀಟರ್ವರೆಗೆ ಮಳೆ ಸುರಿದಿದೆ. ಉಳಿದ ಜಿಲ್ಲೆಗಳಲ್ಲಿ 1 ಸೆಂ.ಮೀಟರ್ವರೆಗೂ ಮಳೆಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಚೆನ್ನೈನ ಬಹುತೇಕ ರಸ್ತೆಗಳು, ಅಂಡರ್ಪಾಸ್ಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಜಲಾವೃತ ಆಡಂಬಾಕಂ ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆಗೆ ಚೆನ್ನೈ ಪಾಲಿಕೆಯು ಸುಮಾರು 23 ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದೆ. ಮಳೆಯಿಂದ ಸಂತ್ರಸ್ತರಾಗಿರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 3.36 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ. ಸೋಮವಾರ ಬೆಳಗಿನವರೆಗಿನ ಮಾಹಿತಿ ಪ್ರಕಾರ, ಜಲಾವೃತ ಪ್ರದೇಶಗಳ 889 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.</p>.<p>ಚೆನ್ನೈನ 15 ವಲಯಗಳ ಮೇಲುಸ್ತುವಾರಿಗೆ 15 ಐಎಎಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ನಿಯೋಜಿಸಿದ್ದಾರೆ. 200 ವಿಶೇಷ ವೈದ್ಯಕೀಯ ಶಿಬಿರಗಳನ್ನು ತೆರೆಯಲಾಗಿದೆ. ತಗ್ಗು ಪ್ರದೇಶಗಳನ್ನು ಆವರಿಸಿರುವ ಕೆಸರು ಹಾಗೂ ಕಸವನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.</p>.<p>ಭಾನುವಾರ ಮಳೆಯಿಂದ ತೊಂದರೆಗೆ ಈಡಾಗಿದ್ದ ನಗರ ರೈಲು ಸೇವೆಯನ್ನು ಮತ್ತೆ ಸರಿದಾರಿಗೆ ತರಲು ಯತ್ನಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ಟ್ವೀಟ್ ಮಾಡಿದೆ. ಅಂತರರಾಜ್ಯ ಬಸ್ ಸೇವೆ ವ್ಯತ್ಯಯಗೊಡಿದೆ. ಮಳೆಯಿಂದಾಗಿ ತರಕಾರಿಗಳ ಬೆಲೆ ಗಗನಕ್ಕೇರಿದ್ದು, ₹30ಕ್ಕೆ ಸಿಗುತ್ತಿದ್ದ ಟೊಮೆಟೋ ₹100ಕ್ಕೆ ಮಾರಾಟವಾಗುತ್ತಿದೆ.</p>.<p><strong>ಪುದುಚೇರಿ ಅಸ್ತವ್ಯಸ್ತ: </strong>ಸೋಮವಾರ ವ್ಯಾಪಕ ಮಳೆ ಸುರಿದ ಕಾರಣ ಪುದುಚೇರಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಂಗಳವಾರವೂ ರಜೆ ಪ್ರಕಟಿಸಲಾಗಿದೆ. ಪುದುಚೇರಿಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 6.1 ಸೆಂ. ಮೀಟರ್ ಮಳೆ ಸುರಿದಿದೆ. ಪುದುಚೇರಿಯ ಎರಡು ಪ್ರಮುಖ ಜಲಮೂಲಗಳಾದ ಬಹೂರ್ ಮತ್ತು ಔಸುಡು ಜಲಾಶಯಗಳಲ್ಲಿ ನೀರಿನ ಮಟ್ಟ ಪೂರ್ಣಮಟ್ಟ ತಲುಪಿದೆ. ಶಂಕರಬರಣಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.\\</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>ತಮಿಳುನಾಡಿನಲ್ಲಿ ಸೋಮವಾರವೂ ಮಳೆ ಮುಂದುವರಿದಿದೆ. ರಾಜಧಾನಿ ಚೆನ್ನೈ ವಲಯ ಹಾಗೂ ರಾಜ್ಯದ ಉತ್ತರ ಭಾಗದ ಜಿಲ್ಲೆಗಳಾದ ಚೆಂಗಲ್ಪೇಟ್, ಕಾಂಚಿಪುರಂ, ತಿರುವಳ್ಳೂರು ಮತ್ತು ವೆಲ್ಲೂರಿನಲ್ಲಿ ಮುಂಜಾನೆಯಿಂದ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.</p>.<p>ಈ ವರ್ಷ ಮುಗಿಯುವುದಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ ಚೆನ್ನೈನಲ್ಲಿ ವರ್ಷದ ಸರಾಸರಿ 140 ಸೆ.ಮೀ ಮಳೆ ಆಗಿದೆ. ನವೆಂಬರ್ 6ರಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರ ಸ್ತಬ್ಧವಾಗಿದೆ. ಮೊದಲ 8 ದಿನಗಳಲ್ಲೇ ತಿಂಗಳ ಸರಾಸರಿ ಮಳೆ ಕೂಡ ಆಗಿದೆ. ಚೆನ್ನೈನ ನವೆಂಬರ್ ತಿಂಗಳ ಸರಾಸರಿ ಮಳೆ 37.4 ಸೆ.ಮೀ ಆಗಿದ್ದು, ನ.1ರಿಂದ 8ರವರೆಗೆ 41.5 ಸೆ.ಮೀ ,ಳೆಯಾಗಿದೆ.</p>.<p>ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, 24 ಗಂಟೆಗಳಲ್ಲಿ ಚೆನ್ನೈ ಉಪನಗರ ವ್ಯಾಪ್ತಿಯಲ್ಲಿ 14 ಸೆಂ.ಮೀಟರ್ವರೆಗೆ ಮಳೆ ಸುರಿದಿದೆ. ಉಳಿದ ಜಿಲ್ಲೆಗಳಲ್ಲಿ 1 ಸೆಂ.ಮೀಟರ್ವರೆಗೂ ಮಳೆಯಾಗಿದೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಚೆನ್ನೈನ ಬಹುತೇಕ ರಸ್ತೆಗಳು, ಅಂಡರ್ಪಾಸ್ಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಜಲಾವೃತ ಆಡಂಬಾಕಂ ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆಗೆ ಚೆನ್ನೈ ಪಾಲಿಕೆಯು ಸುಮಾರು 23 ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದೆ. ಮಳೆಯಿಂದ ಸಂತ್ರಸ್ತರಾಗಿರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 3.36 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ. ಸೋಮವಾರ ಬೆಳಗಿನವರೆಗಿನ ಮಾಹಿತಿ ಪ್ರಕಾರ, ಜಲಾವೃತ ಪ್ರದೇಶಗಳ 889 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.</p>.<p>ಚೆನ್ನೈನ 15 ವಲಯಗಳ ಮೇಲುಸ್ತುವಾರಿಗೆ 15 ಐಎಎಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ನಿಯೋಜಿಸಿದ್ದಾರೆ. 200 ವಿಶೇಷ ವೈದ್ಯಕೀಯ ಶಿಬಿರಗಳನ್ನು ತೆರೆಯಲಾಗಿದೆ. ತಗ್ಗು ಪ್ರದೇಶಗಳನ್ನು ಆವರಿಸಿರುವ ಕೆಸರು ಹಾಗೂ ಕಸವನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.</p>.<p>ಭಾನುವಾರ ಮಳೆಯಿಂದ ತೊಂದರೆಗೆ ಈಡಾಗಿದ್ದ ನಗರ ರೈಲು ಸೇವೆಯನ್ನು ಮತ್ತೆ ಸರಿದಾರಿಗೆ ತರಲು ಯತ್ನಿಸಲಾಗುತ್ತಿದೆ ಎಂದು ದಕ್ಷಿಣ ರೈಲ್ವೆ ಟ್ವೀಟ್ ಮಾಡಿದೆ. ಅಂತರರಾಜ್ಯ ಬಸ್ ಸೇವೆ ವ್ಯತ್ಯಯಗೊಡಿದೆ. ಮಳೆಯಿಂದಾಗಿ ತರಕಾರಿಗಳ ಬೆಲೆ ಗಗನಕ್ಕೇರಿದ್ದು, ₹30ಕ್ಕೆ ಸಿಗುತ್ತಿದ್ದ ಟೊಮೆಟೋ ₹100ಕ್ಕೆ ಮಾರಾಟವಾಗುತ್ತಿದೆ.</p>.<p><strong>ಪುದುಚೇರಿ ಅಸ್ತವ್ಯಸ್ತ: </strong>ಸೋಮವಾರ ವ್ಯಾಪಕ ಮಳೆ ಸುರಿದ ಕಾರಣ ಪುದುಚೇರಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಂಗಳವಾರವೂ ರಜೆ ಪ್ರಕಟಿಸಲಾಗಿದೆ. ಪುದುಚೇರಿಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 6.1 ಸೆಂ. ಮೀಟರ್ ಮಳೆ ಸುರಿದಿದೆ. ಪುದುಚೇರಿಯ ಎರಡು ಪ್ರಮುಖ ಜಲಮೂಲಗಳಾದ ಬಹೂರ್ ಮತ್ತು ಔಸುಡು ಜಲಾಶಯಗಳಲ್ಲಿ ನೀರಿನ ಮಟ್ಟ ಪೂರ್ಣಮಟ್ಟ ತಲುಪಿದೆ. ಶಂಕರಬರಣಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.\\</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>